Breaking News
Home / Uncategorized / ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು:ಎಚ್.ವಿಶ್ವನಾಥ್

ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು:ಎಚ್.ವಿಶ್ವನಾಥ್

Spread the love

ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಹೋಗಬೇಕೆಂದರೆ ಹೊಸ ಮುಖಗಳು ಬೇಕು. ಹೀಗಾಗಿ ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಹಾಲಿ ಸಚಿವರನ್ನಿಟ್ಟುಕೊಂಡು ಹೋದರೆ ಮುಂದಿನ ಸಾರ್ವತ್ರಿಕ ಚುನಾವಣೆ ಗೆಲ್ಲುವುದು ಕಷ್ಟ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹಾಲಿ ಸಚಿವರಿಗೆ ಎಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ. ಉಪಚುನಾವಣೆ ಸಹಜವಾಗಿ ಸರ್ಕಾರದ ಪರವಾಗಿ ಬರುತ್ತದೆ. ಉಪಚುನಾವಣೆಗಳನ್ನು ಸರ್ಕಾರಗಳು ನಡೆಸುತ್ತವೆ. ಆದರೆ ಸಾರ್ವತ್ರಿಕ ಚುನಾವಣೆ ಪಕ್ಷ ನಡೆಸುತ್ತದೆ. ಹೀಗಾಗಿ ಹೊಸ ಮುಖಗಳು ಸಂಪುಟದೊಂದಿಗೆ ಹೋಗಬೇಕು. ಸಾರ್ವತ್ರಿಕ ಚುನಾವಣೆ ಗೆಲ್ಲಬೇಕಾದರೆ ಸಂಪುಟ ಪುನರ್ ರಚನೆಯಾಗಬೇಕಾಗುತ್ತದೆ ಎಂದು ವಿಶ್ವನಾಥ್ ಹೇಳಿದ್ದಾರೆ.


Spread the love

About Laxminews 24x7

Check Also

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

Spread the love ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ