Breaking News

ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು:ಎಚ್.ವಿಶ್ವನಾಥ್

Spread the love

ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಹೋಗಬೇಕೆಂದರೆ ಹೊಸ ಮುಖಗಳು ಬೇಕು. ಹೀಗಾಗಿ ಹೊಸ ಸಚಿವರಿಗೆ ಅವಕಾಶ ನೀಡಲು ಸಚಿವ ಸಂಪುಟವನ್ನು ಪುನರ್ ರಚನೆ ಮಾಡಬೇಕು ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಹಾಲಿ ಸಚಿವರನ್ನಿಟ್ಟುಕೊಂಡು ಹೋದರೆ ಮುಂದಿನ ಸಾರ್ವತ್ರಿಕ ಚುನಾವಣೆ ಗೆಲ್ಲುವುದು ಕಷ್ಟ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹಾಲಿ ಸಚಿವರಿಗೆ ಎಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ. ಉಪಚುನಾವಣೆ ಸಹಜವಾಗಿ ಸರ್ಕಾರದ ಪರವಾಗಿ ಬರುತ್ತದೆ. ಉಪಚುನಾವಣೆಗಳನ್ನು ಸರ್ಕಾರಗಳು ನಡೆಸುತ್ತವೆ. ಆದರೆ ಸಾರ್ವತ್ರಿಕ ಚುನಾವಣೆ ಪಕ್ಷ ನಡೆಸುತ್ತದೆ. ಹೀಗಾಗಿ ಹೊಸ ಮುಖಗಳು ಸಂಪುಟದೊಂದಿಗೆ ಹೋಗಬೇಕು. ಸಾರ್ವತ್ರಿಕ ಚುನಾವಣೆ ಗೆಲ್ಲಬೇಕಾದರೆ ಸಂಪುಟ ಪುನರ್ ರಚನೆಯಾಗಬೇಕಾಗುತ್ತದೆ ಎಂದು ವಿಶ್ವನಾಥ್ ಹೇಳಿದ್ದಾರೆ.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ