Breaking News

ಯಾರಿಗೆ ಯಾವ ಖಾತೆ ಮೇಲೆ ಕಣ್ಣು?

Spread the love

ಯಾರಿಗೆ ಯಾವ ಖಾತೆ ಮೇಲೆ ಕಣ್ಣು?
ಗೃಹಸಚಿವರಾಗಿರುವ ಬೊಮ್ಮಾಯಿ ಇಂಧನ ಖಾತೆ ಮೇಲೆ ಕಣ್ಣು ಇಟ್ಟಿದ್ದರೆ ಕೈಗಾರಿಕಾ ಖಾತೆಯನ್ನು ನೋಡಿಕೊಳ್ಳುತ್ತಿರುವ ಜಗದೀಶ್ ಶೆಟ್ಟರ್ ಗ್ರಾಮೀಣಾಭಿವೃದ್ಧಿ ಮತ್ತು ಕಂದಾಯ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ.

ಆರ್. ಅಶೋಕ್ ಅವರು ಹಾಲಿ ಕಂದಾಯ ಸಚಿವರಾಗಿದ್ದು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಬಯಸಿದ್ದಾರೆ. ಸದ್ಯ ಸಿಎಂ ಯಡಿಯೂರಪ್ಪನವರು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನೋಡಿಕೊಳ್ಳುತ್ತಿದ್ದಾರೆ.

ವಸತಿ ಇಲಾಖೆಯನ್ನು ನೋಡಿಕೊಳ್ಳುತ್ತಿರುವ ವಿ.ಸೋಮಣ್ಣ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮೇಲೆ ಕಣ್ಣು ಹಾಕಿದ್ದರೆ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಕಂದಾಯ ಇಲಾಖೆ ಮೇಲೆ ಗಮನ ಹಾಕಿದ್ದಾರೆ.

ಶ್ರೀರಾಮುಲು ಅವರು ಸದ್ಯ ಸಮಾಜ ಕಲ್ಯಾಣ ಇಲಾಖೆಯನ್ನು ನೋಡಿಕೊಳ್ಳುತ್ತಿದ್ದಾರೆ. ಆದರೆ ಈಗ ಹೆಚ್ಚುವರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಕೇಳಿದ್ದಾರೆ. ಹಾಲಿ ಅರಣ್ಯ ಸಚಿವ ಆನಂದ್ ಸಿಂಗ್ ಗಣಿ/ಭೂವಿಜ್ಞಾನ ಇಲಾಖೆಯ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ