ಬೆಂಗಳೂರು : ಸದಾಶಿವನಗರದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದ್ದಾರೆ.
ಆರ್.ಆರ್.ನಗರ ವಿಧಾನಸಭೆ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಶಾಸಕ ಮುನಿರತ್ನ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ.
ಇನ್ನು ನಿನ್ನೆಯ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮುನಿರತ್ನ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದರು.
