Breaking News

ಮುಂದುವರಿದ ರಾಷ್ಟ್ರಗಳು ಈಗಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತಿವೆ.ಇವಿಎಂ ಬಗ್ಗೆ ಅನುಮಾನವಿದೆ: ಸತೀಶ್‌ ಜಾರಕಿಹೊಳಿ

Spread the love

ಚಿಕ್ಕೋಡಿ: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಇವಿಎಂ ಯಂತ್ರದ ಬಗ್ಗೆ ಅನುಮಾನವಿದೆ. ಇವಿಎಂ ಬಗ್ಗೆ ಹಿಂದೆಯೂ ಅನುಮಾನವಿತ್ತು ಮುಂದೆಯು ಇರುತ್ತದೆ. ಬ್ಯಾಲೆಟ್ ಪೇಪರ್‌ ಬಳಕೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಮುಂದುವರಿದ ರಾಷ್ಟ್ರಗಳು ಈಗಲೂ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತಿವೆ. ಬಿಹಾರ ಚುನಾವಣೆಯಲ್ಲಿ ಬಿಜೆಪಿಗೆ ಎಷ್ಟು ಬೇಕು ಅಷ್ಟು ಸ್ಥಾನಗಳಿಗೆ ತಂದು ನಿಲ್ಲಿಸಿದ್ರು  ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಇಬ್ಭಾಗವಾಗುತ್ತದೆ ಎಂಬ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆಗೆ ಟಾಂಗ್ ನೀಡಿದ ಅವರು, ಸವದಿಯವರು ಹೇಳಿದರೆ ನಮ್ಮ ಪಕ್ಷ ಇಬ್ಬಾಗವಾಗುವುದಿಲ್ಲ. ನಮ್ಮ ಪಕ್ಷ ಕಾರ್ಯಕರ್ತರಿಂದ ಕೂಡಿದೆ. ಆರ್ ಆರ್ ನಗರ ಹಾಗೂ ಶಿರಾದಲ್ಲಿ ಬಿಜೆಪಿ ಗೆದ್ದಿದೆ. ಜನರು ಆಡಳಿತ ಪಕ್ಷವನ್ನು ಬೆಂಬಲಿಸುವುದು ಸಾಮಾನ್ಯ. ಅಧಿಕಾರದಲ್ಲಿ ನಾವು ಇದ್ದಾಗ ಜಯಗಳಿಸಿದ್ದೆವು. ಈ ಸೋಲಿನಿಂದ ಕಾಂಗ್ರೆಸ್ ಗೆ ಯಾವುದೇ ಹಿನ್ನಡೆಯಾಗಿಲ್ಲ ಜವಾಬ್ದಾರಿ ಇನ್ನಷ್ಟು ಹೆಚ್ಚಿದೆ . ನಮ್ಮ ಗುರಿ ಮುಂಬರುವ ಮಹಾ ಚುನಾವಣಾ ಮೇಲಿದೆ ಎಂದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ