Breaking News

ಅದ್ಯಕ್ಷ ಉಪಾದ್ಯಕ್ಷರ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು ಅದ್ಯಕ್ಷ ಉಪಾದ್ಯಕ್ಷರ ಹೆಸರುಗಳನ್ನು ಇವತ್ತೇ ರಾತ್ರಿ ಹತ್ತು ಗಂಟೆಗೆ ಡಿಕ್ಲೇರ್ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

Spread the love

ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ಅದ್ಯಕ್ಷ ಉಪಾದ್ಯಕ್ಷರ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು ಅದ್ಯಕ್ಷ ಉಪಾದ್ಯಕ್ಷರ ಹೆಸರುಗಳನ್ನು ಇವತ್ತೇ ರಾತ್ರಿ ಹತ್ತು ಗಂಟೆಗೆ ಡಿಕ್ಲೇರ್ ಮಾಡುತ್ತೇವೆ ಎಂದು ಕೆಏಂಎಫ್ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯ ಸಂಕಮ್ ಹೊಟೇಲ್ ನಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಅದ್ಯಕ್ಷ ಆಗಬೇಕೆನ್ನುವ ಆಕಾಂಕ್ಷೆ ಎಲ್ಲರಿಗೂ ಇರುತ್ತದೆ ಲಕ್ಷ್ಮಣ ಸವದಿ,ರಮೇಶ್ ಜಾರಕಿಹೊಳಿ,ಮತ್ತು ಉಮೇಶ್ ಕತ್ತಿ ಮತ್ತು ಇನ್ನುಳಿದ ಹಿರಿಯರ ಜೊತೆ ಸರ್ಕ್ಯುಟ್ ಹೌಸ್ ನಲ್ಲಿ ಸಭೆ ಮಾಡಿ ಇವತ್ತೇ ರಾತ್ರಿ ಅದ್ಯಕ್ಷ ಉಪಾದ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸರ್ಕ್ಯುಟ್ ಹೌಸ್ ನಲ್ಲಿನಡೆಯುತ್ತಿದೆ ಮಹತ್ವದ ಸಭೆ

ಡಿಸಿಸಿ ಬ್ಯಾಂಕ್ ಅದ್ಯಕ್ಷ ಉಪಾದ್ಯಕ್ಷ ಸ್ಥಾನಕ್ಕೆ ಹೆಸರುಗಳನ್ನು ಅಂತಿಮಗೊಳಿಸಲು,ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಲಕ್ಷ್ಮಣ ಸವದಿ,ಈರಣ್ಣಾ ಕಡಾಡಿ,ಮತ್ತು ಕತ್ತಿ ಸಹೋದರರು ಬೆಳಗಾವಿಯ ಸರ್ಕ್ಯುಟ್ ಹೌಸ್ ನಲ್ಲಿ ಸಭೆ ನಡೆಸಿದ್ದಾರೆ ಸಭೆ ಈಗ ಆರಂಭವಾಗಿದ್ದು ನಿರ್ದೇಶಕರು ಮಾತ್ರ ಬೆಳಗಾವಿಯ ಸಂಕಮ್ ಹೊಟೇಲ್ ನಲ್ಲಿ ಇದ್ದಾರೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ