Breaking News

ಹಬ್ಬಕ್ಕೆ ಸಾಲು ಸಾಲು ರಜೆ – ಮೆಜೆಸ್ಟಿಕ್ KSRTC ಬಸ್ ನಿಲ್ದಾಣದಲ್ಲಿ ಜನಜಾತ್ರೆ

Spread the love

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿನ ಮಂದಿ ಊರುಗಳತ್ತ ಪ್ರಯಾಣಿಸುತ್ತಿದ್ದು, ಮೆಜೆಸ್ಟಿಕ್ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಜಾತ್ರೆಯಂತಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರು ನಗರದ ಬಹುತೇಕ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಜನ ಮಳೆ ಮತ್ತು ಕೊರೊನಾ ಸಹ ಲೆಕ್ಕಿಸದೇ ಊರುಗಳತ್ತ ಹೊರಟು ನಿಂತಿದ್ದಾರೆ.

ಹಬ್ಬದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಸ್ ನಿಲ್ದಾಣದತ್ತ ಆಗಮಿಸಿದ್ದರಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ತುಮಕೂರು, ಬಳ್ಳಾರಿ, ಮೈಸೂರು ರಸ್ತೆಗಳು ಜನರಿಂದ ತುಂಬಿ ತುಳುಕುತ್ತಿದ್ದು, ವಾಹನಗಳು ಮಂದಗತಿಯಲ್ಲಿ ಸಾಗುತ್ತಿವೆ.

ಇನ್ನು ಖಾಸಗಿ ವಾಹನಗಳು ದೀಪಾವಳಿಯನ್ನೇ ಬಂಡವಾಳ ಮಾಡಿಕೊಂಡಿದ್ದು ಪ್ರಯಾಣ ದರವನ್ನ ದುಪ್ಪಟ್ಟು ವಸೂಲಿ ಮಾಡಿಕೊಳ್ಳುತ್ತಿವೆ. ಬಸ್ ನಿಲ್ದಾಣ, ಪ್ರಮುಖ ರಸ್ತೆಗಳಲ್ಲಿ ಜನರು ಸಾಮಾಜಿಕ ಅಂತರವನ್ನೇ ಮರೆತು ಊರಿಗೆ ಸಡಗರದಲ್ಲಿದ್ದಾರೆ. ಸಣ್ಣ ಮಕ್ಕಳು, ವೃದ್ಧರು ಎನ್ನದೇ ಗುಂಪು ಗುಂಪಾಗಿದೆ ಎಲ್ಲರೂ ಪ್ರಯಾಣ ಬೆಳೆಸುತ್ತಿರೋದು ಕೊರೊನಾ ಆತಂಕಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ