Breaking News

ಗೆಳೆಯರಿಬ್ಬರ ಹಳೇ ವೈಷಮ್ಯ ಮುಖಕ್ಕೆ ಆ್ಯಸಿಡ್ ಅಂಶವಿರುವ ಕೆಮಿಕಲ್ ಎರಚುವ ಮಟ್ಟಕ್ಕೆ ತಲುಪಿ ಗಲಾಟೆ

Spread the love

ಕಾರವಾರ: ಕುಚುಕು ಗೆಳೆಯರಿಬ್ಬರಲ್ಲಿ ಗಣಪತಿ ವಿಸರ್ಜನೆ ವೇಳೆ ಉಂಟಾದ ಬಿನ್ನಾಭಿಪ್ರಾಯ ದೀಪಾವಳಿಯಲ್ಲಿ ಸಿಡಿದಿದೆ. ಗೆಳೆಯರಿಬ್ಬರ ಹಳೇ ವೈಷಮ್ಯ ಮುಖಕ್ಕೆ ಆ್ಯಸಿಡ್ ಅಂಶವಿರುವ ಕೆಮಿಕಲ್ ಎರಚುವ ಮಟ್ಟಕ್ಕೆ ತಲುಪಿ ಗಲಾಟೆಯಾಗಿದೆ. ಇಂದು ರಾತ್ರಿ ಕಾರವಾರದ ಗ್ರೀನ್ ಸ್ಟ್ರೀಟ್ ಬಳಿ ಈ ಘಟನೆ ನಡೆದಿದೆ.

ಕಾರವಾರದ ಮಾಜಾಳಿಯ ಹರೀಶ್ ಮತ್ತು ನಿತೇಶ್ ನಾಯ್ಕ ಇಬ್ಬರೂ ಮೊದಲು ಸ್ನೇಹಿತರಾಗಿದ್ದರು. ಹಳೇ ದ್ವೇಷದ ಹಿನ್ನೆಲೆಯಲ್ಲಿ ನಿತೇಶ್ ನಾಯ್ಕಗೆ ಹರೀಶ್ ಗ್ರೀನ್ ಸ್ಟ್ರೀಟ್ ಬಳಿ ಆಸಿಡ್ ಅಂಶವಿರುವ ಕೆಮಿಕಲ್ ಅನ್ನು ಎರಚಿ ಪರಾರಿಯಾಗಿದ್ದಾನೆ.

ನಿತೇಶ್ ನಾಯ್ಕಗೆ ಆ್ಯಸಿಡ್ ಅಂಶದ ಕೆಮಿಕಲ್ ನಿಂದ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ. ಗಾಯಾಳು ನಿತೇಶ್ ನನ್ನು ಕಾರವಾರದ ಸರ್ಕರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ