Breaking News

ಸುಖ ಸಂಸಾರಕ್ಕೆ ಹುಳಿ ಹಿಂಡಿದ ಜ್ಯೋತಿಷಿ ,ಪತಿಯ ಕಾಟಕ್ಕೆ ಹೆಂಡತಿ ಆತ್ಮಹತ್ಯೆ…

Spread the love

ಬೆಂಗಳೂರು: ಜ್ಯೋತಿಷಿ ಮಾತು ಕೇಳಿ ಪಾಪಿ ಪತಿ ನವವಿವಾಹಿತೆಗೆ ಕಿರುಕುಳ ನೀಡಿದ್ದು, ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ.

ಅಶ್ವಿನಿ(25) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ, ನಗರದ ಹೆಣ್ಣೂರಿನಲ್ಲಿ ಘಟನೆ ನಡೆದಿದ್ದು, ಪತಿ ಯುವರಾಜ್ ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಪತಿ ಜೊತೆಗೆ ಮನೆಯವರೆಲ್ಲ ಕಿರುಕುಳ ನೀಡಲು ಆರಂಭಿಸಿದ್ದು, ಇದರಿಂದ ಬೇಸತ್ತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಶ್ವಿನಿ ಕಳೆದ ಫೆಬ್ರವರಿಯಲ್ಲಿ ಯುವರಾಜ್‍ನನ್ನು ವಿವಾಹವಾಗಿದ್ದರು. ಆರಂಭದಲ್ಲಿ ಸಂಸಾರ ಸುಖಕರವಾಗಿಯೇ ಇತ್ತು. ಆದರೆ ಈ ವೇಳೆ ಮನೆಗೆ ಬಂದ ಜ್ಯೋತಿಷಿಯೊಬ್ಬರು ಅಶ್ವಿನಿಗೆ ಮಕ್ಕಳಾಗಲ್ಲ ಎಂದು ಭವಿಷ್ಯ ನುಡಿದಿದ್ದರು. ಜ್ಯೋತಿಷಿ ಮಾತು ಯುವರಾಜ್ ಮನೆಯರಿಗೆ ಕಾಡುತ್ತಿತ್ತು. ಹೀಗಾಗಿ ಅಶ್ವಿನಿಗೆ ನಿತ್ಯ ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ಅಶ್ವಿನಿ ಬೇಸತ್ತಿದ್ದರು.

ಪ್ರತಿದಿನ ಗಂಡನ ಮನೆಯವರ ಕಿರುಕುಳ ತಾಳಲಾರದೆ ಅಶ್ವಿನಿ ಮನೆಯಲ್ಲೇ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ

Spread the loveಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ