Breaking News

ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ.ಸಿಎಂ:ಲಕ್ಷ್ಮಣ್ ಸವದಿ

Spread the love

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ತಕ್ಷಣ ಎರಡು ತಿಂಗಳ ವೇತನ ಕೊಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸವದಿ, ಸಾರಿಗೆ ಇಲಾಖೆ ಸಿಬ್ಬಂದಿಯ ಮೂರು ತಿಂಗಳ ವೇತನ ಸಮಸ್ಯೆ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ವೇತನ ಕೊಡಲು ಸಂಕಷ್ಟ ಎದುರಾಗಿದೆ. ಕೊರೊನಾದಿಂದ ಆರ್ಥಿಕ ಸಮಸ್ಯೆ ಇದೆ. ಇಂದು ಈ ಸಮಸ್ಯೆಯನ್ನು ಸಿಎಂಗೆ ಮನವರಿಕೆ ಮಾಡಿದೆವು ಎಂದ ಅವರು ಬಸ್ ಟಿಕೆಟ್ ದರ ಹೆಚ್ಚಳ ಸದ್ಯ ಏನೂ ಚರ್ಚೆ ಆಗಿಲ್ಲ. ಹೆಚ್ಚಳದ ಪ್ರಸ್ತಾಪ ಸದ್ಯ ನಮ್ಮ ಮುಂದೆ ಇಲ್ಲ ಅಂತ ತಿಳಿಸಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ