Breaking News

ಕಾಲೇಜಿನಲ್ಲಿ ಒಬ್ಬಳೇ ವಿದ್ಯಾರ್ಥಿನಿ ಆಗಮಿಸಿದ್ದಳು: ಪಾಠ ಮಾಡಿದ ಶಿಕ್ಷಕ

Spread the love

ರಾಯಚೂರು : ಇಂದಿನಿಂದ ರಾಜ್ಯದಲ್ಲಿ ಕಾಲೇಜುಗಳು ಮತ್ತೆ ತೆರೆದಿವೆ. ಆದರೆ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿಲ್ಲ.

ಕಾಲೇಜುಗಳು ಆರಂಭವಾದರೂ ವಿದ್ಯಾರ್ಥಿಗಳು ಕ್ಲಾಸ್ ಬಂದಿಲ್ಲ. ರಾಯಚೂರಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಬ್ಬಳೇ ವಿದ್ಯಾರ್ಥಿನಿ ಆಗಮಿಸಿದ್ದು, ಆಕೆಗೆ ಉಪನ್ಯಾಸಕರು ಪಾಠ ಮಾಡಿದ್ದಾರೆ.

ಒಬ್ಬ ಬಿ.ಕಾಂ. ವಿದ್ಯಾರ್ಥಿನಿಗೆ ಶಿಕ್ಷಕರು ಪಾಠ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಕುಳಿತ ವಿದ್ಯಾರ್ಥಿನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಉಪನ್ಯಾಸಕರು ಸಹ ಮಾಸ್ಕ್ ಹಾಕಿಕೊಂಡು ಕೋವಿಡ್ ನಿಯಮ ಪಾಲಿಸಿ ಬೋಧನೆ ಮಾಡಿದ್ದಾರೆ.

ಈ ಕಾಲೇಜಿನಲ್ಲಿ ಒಟ್ಟು ಪದವಿ ಅಂತಿಮ ವರ್ಷದಲ್ಲಿ 1200 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.

ಅದರೆ ಯಾರೂ ಬಾರದೇ ಒಬ್ಬಳೆ ವಿದ್ಯಾರ್ಥಿನಿ ಆಗಮಿಸಿದ್ದಾಳೆ.

ರಾಜ್ಯದ ಎಲ್ಲೆಡೆ ಕಾಲೇಜುಗಳು ತೆರೆದರೂ ಕೂಡ ಎಲ್ಲಿಯೂ ಕೂಡ ವಿದ್ಯಾರ್ಥಿಗಳು ಆಗಮಿಸಿಲ್ಲ. ಇನ್ನೂ ಕೊರೋನಾ ಮಹಾಮಾರಿ ಆತಂಕ ಜನರಲ್ಲಿ ಹೆಚ್ಚಾಗಿಯೇ ಇದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಆಗಮಿಸಿಲ್ಲ.


Spread the love

About Laxminews 24x7

Check Also

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Spread the loveರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ