Breaking News

ಮಹೀಂದ್ರ ಸ್ಕಾರ್ಪಿಯೋ ಕಾರನ್ನು ಮರಕ್ಕೆ ಕಬ್ಬಿಣದ ಚೈನ್ ಮೂಲಕ ಕಟ್ಟಿ ಹಾಕಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

Spread the love

ಮುಂಬೈ: ಸೋಶಿಯಲ್ ಮೀಡಿಯಾದಲ್ಲಿ ಮಹೀಂದ್ರ ಮುಖ್ಯಸ್ಥ ಆನಂದ್ ಮಹೀಂದ್ರ ಇದೀಗ ಸ್ವಾರಸ್ಯಕರ ಮಾಹಿತಿ ಹಂಚಿಕೊಂಡಿದ್ದಾರೆ. ಮಾಲೀಕನೋರ್ವ ತನ್ನ ಮಹೀಂದ್ರ ಸ್ಕಾರ್ಪಿಯೋ ಕಾರನ್ನು ಮರಕ್ಕೆ ಕಬ್ಬಿಣದ ಚೈನ್ ಮೂಲಕ ಕಟ್ಟಿ ಹಾಕಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಗಮನಿಸಿದ ಆನಂದ್ ಮಹೀಂದ್ರ ವಿವರಣೆಯೊಂದಿಗೆ ಟ್ವೀಟ್ ಮಾಡಿದ್ದಾರೆ.

ಇದು ಹೈಟೆಕ್ ಲಾಕಿಂಗ್ ಸಿಸ್ಟಮ್ ಅಲ್ಲ, ಇದರಲ್ಲಿ ಮಾಲೀಕರ ಪೊಸೆಸೀವ್‌ನೆಸ್ ಎದ್ದುಕಾಣುತ್ತಿದೆ. ನನಗೆ ಈ ಚಿತ್ರ ಕೆಲ ನೆನಪನ್ನು ಬಿಚ್ಚಿಡುತ್ತಿದೆ. ಲಾಕ್‌ಡೌನ್ ಸಮಯದಲ್ಲಿ ನಾನು ಹೇಗಿದ್ದೆ ಅನ್ನೋದನ್ನು ಈ ಚಿತ್ರ ಹೇಳುತ್ತಿದೆ. ಈ ವಾರಾಂತ್ಯದಲ್ಲಿ ನಾನು ಈ ಚೈನ್ ಮುರಿಯುತ್ತೇನೆ ಎಂದು ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Spread the loveವಾಷಿಂಗ್ಟನ್: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ