ಕೊಪ್ಪಳ: ಬಸವಕಲ್ಯಾಣ ಮತ್ತು ಮಸ್ಕಿಯ ಕ್ಷೇತ್ರದದಲ್ಲಿ ಬ್ಯಾಲೆಟ್ ಪೇಪರಿನಲ್ಲಿ ಉಪಚುನಾವಣೆ ನಡೆಸಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿಗೆ ಬಹಿರಂಗ ಸವಾಲು ಎಸೆದಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿಯ ಸ್ವಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ತಂಗಡಗಿ, ತಾಕತ್ತಿದ್ದರೆ ಇವಿಎಂ ಯಂತ್ರ ಇಲ್ಲದೆ ಗೆದ್ದು ತೋರಿಸಲಿ ಎಂದು ಬಿಜೆಪಿಯವರಿಗೆ ಸವಾಲು ಹಾಕಿದರು. ರಾಜ್ಯದಲ್ಲಿ ಗ್ರಾ.ಪಂ, ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆದರೆ ಎಂಪಿ ಎಂಎಲ್ಎ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಇದು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದರು.
Laxmi News 24×7