Breaking News

ಆರೋಗ್ಯ ಇಲಾಖೆ ಎಡವಟ್ಟಿನಿಂದ ಕಾಲೇಜು ತರಗತಿಗಳು ಮಾತ್ರ ಇನ್ನೂ ಆರಂಭವಾಗಿಲ್ಲ. ರಿಪೋರ್ಟ್ ಸಿಗದೆ ಪರದಾಟ

Spread the love

ಯಾದಗಿರಿ: ಕೊರೊನಾ ಮಹಾಮಾರಿ ಆತಂಕ ನಡುವೆಯೆ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪದವಿ ಕಾಲೇಜುಗಳನ್ನು ಆರಂಭ ಮಾಡಿದೆ. ಆದರೆ ಆರೋಗ್ಯ ಇಲಾಖೆ ಎಡವಟ್ಟಿನಿಂದ ತರಗತಿಗಳು ಮಾತ್ರ ಇನ್ನೂ ಆರಂಭವಾಗಿಲ್ಲ.

ಹೌದು. ಯಾದಗಿರಿ ಜಿಲ್ಲೆಯ ಪದವಿ ಕಾಲೇಜುಗಳ ಆವರಣದಲ್ಲಿ ವಿದ್ಯಾರ್ಥಿಗಳನ್ನು ಮರದ ಕೆಳಗೆ, ಕಾಲೇಜು ಮುಂದಿನ ಕಟ್ಟೆಯ ಮೇಲೆ, ಕಾಲೇಜು ಗೇಟ್ ಬಳಿ ಸಿಬ್ಬಂದಿ ಸ್ಟಾಪ್ ಮಾಡುತ್ತಿದ್ದಾರೆ. ಈ ಹಿಂದೆ ಜನರ ಕೊರೊನಾ ಟೆಸ್ಟ್ ವರದಿ ನೀಡುವಲ್ಲಿ ನಿಧಾನಗತಿ ಅನುಸರಿಸಿ ಜನರ ಜೀವನದ ಜೊತೆ ಆಟವಾಡಿದ್ದ ಆರೋಗ್ಯ ಇಲಾಖೆ, ಈಗ ವಿದ್ಯಾರ್ಥಿಗಳ ವಿಚಾರದಲ್ಲೂ ಅದೇ ಎಡವಟ್ಟು ಮಾಡುತ್ತಿದೆ. ಕಾಟಾಚಾರಕ್ಕೆಂಬಂತೆ ಟೆಸ್ಟಿಂಗ್ ಕಿಟ್ ತಂದು, ಕಾಲೇಜು ಮುಂದಿಡಲಾಗಿದೆ. ಆದರೆ ತಾಂತ್ರಿಕ ಸಮಸ್ಯೆ ಅಂತ ಟೆಸ್ಟ್ ಮಾಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ರಿಪೋರ್ಟ್ ಸಿಗದೆ ಕಾಲೇಜ್ ಹೊರಗೆ ಕೂರುವಂತಾಗಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆಗೆ ಸೆಪ್ಟೆಂಬರ್​ನಲ್ಲಿ ಭರ್ಜರಿ ಆದಾಯ: ಸರಕು ಸಾಗಣೆಯಿಂದ ₹427, ಪ್ರಯಾಣಿಕರಿಂದ ₹282 ಕೋಟಿ ಗಳಿಕೆ

Spread the love ಹುಬ್ಬಳ್ಳಿ: ಸೆ. 2025ರಲ್ಲಿ ನೈಋತ್ಯ ರೈಲ್ವೆಯು ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ