Breaking News

ಉಗ್ರ ಚಟುವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ: ಪ್ರಹ್ಲಾದ್ ಜೋಶಿ

Spread the love

ಧಾರವಾಡ: ಕಾಶ್ಮೀರದಲ್ಲಿ ಉಗ್ರರ ಪಡೆಯನ್ನು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ಇಂತಹ ದೇಶದ್ರೋಹಿ ಉಗ್ರ ಚಟುವಟಿಕೆಗಳ ಹಿಂದೆ ಗುಪ್ಕಾರ್ ಗ್ಯಾಂಗ್ ಕುಮ್ಮಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗ್ಯಾಂಗ್ ಜೊತೆಗಿರುವ ಪಕ್ಷಗಳ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ. ಗುಪ್ಕಾರ್ ಜೊತೆಗಿನ ಸಂಬಂಧದ ಬಗ್ಗೆ ಕಾಂಗ್ರೆಸ್ ಸ್ಪಷ್ಟಪಡಿಸಬೇಕು. ಏ ರಿಸ್ತಾ ಕ್ಯಾ ಕೆಹತಾ ಹೈ ಎಂದು ಕಾಂಗ್ರೆಸ್ ಹೇಳಬೇಕು. ತಾಯಿಗೆ ಹುಷಾರಿಲ್ಲ ಎಂದು ರಾಹುಲ್ ಗಾಂಧಿ ಗೋವಾದಲ್ಲಿ ಕುಳಿತಿದ್ದಾರೆ. ಅಲ್ಲಿಂದಲೇ ರಾಹುಲ್ ನಿಲುವು ಸ್ಪಷ್ಟಪಡಿಸಬೇಕು. ಅಸಹಿಷ್ಣುತೆ ಬಗ್ಗೆ ಮಾತನಾಡಿದವರು ಗುಪ್ಕಾರ್ ಬಗ್ಗೆ ಮಾತನಾಡುತ್ತಿಲ್ಲ. ಅವಾರ್ಡ್ ವಾಪಸಿ ಗ್ಯಾಂಗ್ ಈ ಬಗ್ಗೆ ಮಾತನಾಡಲಿ. ಆತ್ಮಸಾಕ್ಷಿ ಇದ್ದರೆ ಗುಪ್ಕಾರ್ ಗ್ಯಾಂಗ್ ಖಂಡಿಸಿ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ