Breaking News

ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಚ್ಚ ಹೊಸ ಕಾರನ್ನು ಕ್ಷಣಾರ್ಧದಲ್ಲಿ ಕದ್ದೊಯ್ದ ಕಳ್ಳರು

Spread the love

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಚ್ಚ ಹೊಸ ಕಾರನ್ನು ಕ್ಷಣಾರ್ಧದಲ್ಲಿ ಕಳ್ಳರು ಕದ್ದೊಯ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಶೋಕ ನಗರದ ಮೃತ್ಯುಂಜಯ ಬಸಣ್ಣಪ್ಪ ಬೆಲದ್ ಹಾಗೂ ರಾಮತೀರ್ಥ ನಗರದ ಉದ್ಯಮಿ ಅನಿಲ್ ಪಾಟೀಲ್‍ಗೆ ಸೇರಿದ ಇನ್ನೋವಾ ಕ್ರಿಸ್ಟಾ ಕಾರನ್ನು ಕಳ್ಳರು ಹೈಟೆಕ್ ಟೆಕ್ನಿಕ್ ಬಳಸಿ ಕಳ್ಳತನ ಮಾಡಿದ್ದಾರೆ. ಹೈಟೆಕ್ ಕಳ್ಳರ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೇಗೆ ಕಳ್ಳತನ?
ಕಾರಿನ ಗ್ಲಾಸ್ ಒಡೆಯದೆ ಕಳ್ಳರು ಕಾರಿನ ಲಾಕರ್ ಹ್ಯಾಕ್ ಮಾಡಿದ್ದಾರೆ. ಕಾರಿನ ರಿಮೋಟ್ ಕೀ ಹ್ಯಾಕ್‍ಮಾಡಿ ಡೋರ್ ಓಪನ್‍ಮಾಡಿದ್ದಾರೆ. ಕ್ಷಣಾರ್ಧದಲ್ಲಿ ಎರಡು ಕಾರು ಖದ್ದು ಸ್ಥಳದಿಂದ ಪರಾರಿಯಾಗಿದ್ದಾರೆ. ಹೈಟೆಕ್ ರೀತಿಯಲ್ಲಿ ಕಾರು ಕಳ್ಳತನ ಮಾಡಿದ ಕಿಲಾಡಿಗಳ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಳ್ಳತನ ಕೃತ್ಯ ಮುಗಿದ ತಕ್ಷಣವೇ ಖದೀಮರು ಸಿಮ್ ಕಾರ್ಡ್ ಬದಲಾಯಿಸಿದ್ದಾರೆ. ಕಾರು ಕಳ್ಳತನದ ದೃಶ್ಯ ನೋಡಿ ಮಾಲೀಕರಷ್ಟೇ ಅಲ್ಲದೇ ಪೊಲೀಸರು ದಂಗಾಗಿದ್ದಾರೆ.

ಈ ಹೈಟೆಕ್ ಕಳ್ಳರ ಸುಳಿವು ಬೆಳಗಾವಿ ಮಹಾನಗರ ಪೊಲೀಸರಿಗೆ ಲಭ್ಯವಾಗಿಲ್ಲ. ಹುಬ್ಬಳ್ಳಿಯಲ್ಲೂ ಇದೇ ರೀತಿಯಾಗಿ ಟೆಕ್ನಿಕ್ ಬಳಸಿ ಕಳ್ಳರು ಕೃತ್ಯ ಎಸಗಿದ್ದಾರೆ. ಈ ಖತರ್ನಾಕ್ ಗ್ಯಾಂಗ್‍ನ ಸದಸ್ಯರಿಗಾಗಿ ಬೆಳಗಾವಿ ಮತ್ತು ಹುಬ್ಬಳ್ಳಿ ಪೊಲೀಸರು ಈಗ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ ಸಂಸದೆ ಪ್ರಿಯಾಂಕಾಗೆ ಕರವೇ ಮನವಿ

Spread the love ಗೋಕಾಕ ಡಿ 24 : ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ