Breaking News

ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Spread the love

ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರತಾಪಗಢದ ಲಾಲ್‍ಗಂಜ್ ವ್ಯಾಪ್ತಿಯ ಬೆಲ್ಹಾ ಗ್ರಾಮದ ಐಟಿಐ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧೀರೇಂದ್ರ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಧೀರೇಂದ್ರ ಪ್ರತಾಪಘಢನಲ್ಲಿ ಐಟಿಐ ಓದುತ್ತಿದ್ದನು. ರಜೆ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಆಗಮಿಸಿದ್ದನು. ಮನೆಗೆ ಬಂದವನು ಎರಡನೇ ಮಹಡಿಯಲ್ಲಿರುವ ಕೋಣೆ ಸೇರಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಾಹ್ನ ತಾಯಿ ಊಟಕ್ಕೆ ಕರೆದಾಗಲೂ ಕೋಣೆಯಿಂದ ಉತ್ತರ ಬಂದಿಲ್ಲ. ಬಾಗಿಲು ತಟ್ಟಿದ್ರೂ ಮಗ ಉತ್ತರಿಸಿದರಿಂದ ಆತಂಕಗೊಂಡ ತಾಯಿ ಬೆಳಕಿನ ಕಿಂಡಿಯಲ್ಲಿ ಇಣುಕಿದಾಗ ಮಗನ ಶವ ನೇತಾಡುತ್ತಿರುವ ಭಯಾನಕ ದೃಶ್ಯ ಕಂಡಿದೆ.

ತಾಯಿಯ ಕಿರುಚಾಟ ಕೇಳಿ ಆಗಮಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಧೀರೇಂದ್ರ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ತನ್ನ ಸಾವಿಗೆ ಪ್ರದೀಪ್ ಸಿಂಗ್ ಮತ್ತು ಆತನ ಸೋದರಳಿಯ ಕಾರಣ ಎಂದು ಬರೆದಿದ್ದಾನೆ. ಹಾಗೆ ತಂದೆ-ತಾಯಿಗೂ ಕ್ಷಮೆ ಕೇಳಿದ್ದಾನೆ.

 


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ