Breaking News

ಪಂಚಾಯಿತಿ ಚುನಾವಣೆಗೆ ಬಿಜೆಪಿಯಿಂದ ಪಂಚಸೂತ್ರ

Spread the love

ಬೆಂಗಳೂರು, ನ.23- ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಪಂಚರತ್ನ, ಪಂಚಸೂತ್ರ ವಿಧಾನದ ಮೂಲಕ ಜಿಲ್ಲೆಯಲ್ಲಿ ಎರಡು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಇಂದು ನಡೆದ ಸಂಘಟನಾ ಸಭೆ ನಂತರ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆ ಬರುತ್ತಿದೆ.

ಕಳೆದ ಬಾರಿ ತಂದಿದ್ದ ಯೋಜನೆಯಿಂದಾಗಿ ಯಶಸ್ವಿಯಾಗಿದ್ದೆವು. ಇದೀಗ ಪಂಚರತ್ನ, ಪಂಚಸೂತ್ರ ವಿಧಾನ ತಂದಿದ್ದೇವೆ. ಒಂದೊಂದು ಸಮುದಾಯವನ್ನೂ ಗುರಿಯಾಗಿಟ್ಟು ಈ ವಿಧಾನ ಅನುಸರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಒಟ್ಟು ಆರು ತಂಡಗಳನ್ನು ಮಾಡಿಕೊಂಡು ಗ್ರಾಮ ಸ್ವರಾಜ್ ಎಂಬ ಕಾರ್ಯಕ್ರಮ ರೂಪಿಸಿ ಅದರಡಿ ಜಿಲ್ಲಾಯಲ್ಲಿ ಎರಡು ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿದೆ. ರಾಜ್ಯದ ನಗರ ಬಿಟ್ಟು ಎಲ್ಲೆಡೆ ಸಮಾವೇಶ ನಡೆಸಲಾಗುವುದು ಎಂದು ವಿವರಿಸಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ