Breaking News

ನಿವಾರ್ ಸೈಕ್ಲೋನ್ ಮುಂದಿನ ಮೂರು ದಿನ ಮಳೆ ಸಂಭವ…………?

Spread the love

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಇನ್ನೆರಡು ದಿನಗಳಲ್ಲಿಯೇ ಅಪ್ಪಳಿಸಲಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಸೈಕ್ಲೋನ್ ಪರಿಣಾಮ ನವೆಂಬರ್ 25 ರಿಂದ 27ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.ಬಂಗಾಲ ಉಪಸಾಗರ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನ.25 ರಂದು ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯಲ್ಲಿ ದಾಟಿ ಕಾರೈಕಲ್, ಮಾಮಲಪುರಂ ಹತ್ತಿರ ಸೈಕ್ಲೋನ್ ಕ್ರಾಸ್ ಆಗುತ್ತೆ. ಇದರ ಪ್ರಭಾವದಿಂದಾಗಿ ಕರಾವಳಿಯ ಕೆಲ ಭಾಗದಲ್ಲಿ ನ.25, 26, 27 ರಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ನ. 23ರಂದು ಒಣ ಹವೆ ಇರಲಿದ್ದು, ನ. 24 ರಿಂದ 27 ರವರೆಗೆ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ