Breaking News
Home / Uncategorized / ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

Spread the love

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ತಡಂಬೈಲ್ ಬಳಿ ಇಂದು ಭೀಕರ ರಸ್ತೆ ಅಪಘಾತ ನಡೆದಿದೆ. ಸುರತಕ್ಲ್ ಸಮೀಪದ ಕ್ರಾಸ್ ರಸ್ತೆ ಬಳಿ ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಮೃತ ದುರ್ದೈವಿಯನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

 

ಬೈಕ್ ಸವಾರ ಏಕಾಏಕಿಯಾಗಿ ರಸ್ತೆಯನ್ನು ಕ್ರಾಸ್ ಮಾಡಿದಾಗ ವೇಗವಾಗಿ ಬಂದ ಲಾರಿ ನಿಯಂತ್ರಣಕ್ಕೆ ಸಿಗದೆ ಬೈಕ್ ಗೆ ಡಿಕ್ಕಿಯಾಗಿದೆ.ಡಿಕ್ಕಿಯಾದ ರಭಸಕ್ಕೆ ಬೈಕ್ ಹಾಗೂ ಸವಾರನನ್ನು ಲಾರಿ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್

Spread the loveಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ