Breaking News

ಬೆಳಗಾವಿ: ಕುರುಬ ಸಮುದಾಯದವರಿಗೆ ಟಿಕೆಟ್ ನೀಡಲು ಒತ್ತಾಯ

Spread the love

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 2ನೇ ಅತೀ ದೊಡ್ಡ ಮತದಾರರಾಗಿ ಕುರುಬ ಸಮುದಾಯದವರಿದ್ದಾರೆ. ಹೀಗಾಗಿ ಈ ಬಾರಿಯ ಬೆಳಗಾವಿ ಲೋಕಸಭೆಯ ಟಿಕೆಟ್ ಕುರುಬ ಸಮುದಾಯದವರಿಗೆ ನೀಡಬೇಕು ಎಂದು ಕುರುಬ ಸಮುದಾಯದ ಮುಖಂಡ ರಾಜೇಂದ್ರ ಸಣ್ಣಕ್ಕಿ ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.

ಸಣ್ಣಕ್ಕಿ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಸಮಾಜದ ಎರಡೂವರೆ ಲಕ್ಷ ಮತದಾರರಿದ್ದಾರೆ. 2ನೇ ಅತೀ ದೊಡ್ಡ ಸಮುದಾಯ ನಮ್ಮದಾಗಿದೆ. ಹೀಗಾಗಿ ನಮ್ಮ ಸಮುದಾಯದವರಿಗೆ ಎಲ್ಲಾ ಪಕ್ಷಗಳು ಪ್ರಾತಿನಿಧ್ಯ ನೀಡಬೇಕು. ನಾನು ವ್ಯಕ್ತಿಗತವಾಗಿ ಇವರಿಗೆ ಟಿಕೆಟ್ ನೀಡಿ ಎಂದು ಹೇಳುವುದಿಲ್ಲ. ಸಮಾಜದ ಯಾರಿಗಾದ್ರೂ ಟಿಕೆಟ್ ನೀಡಿದ್ರೂ ನಮಗೆ ಸಂತೋಷ ಆಗುತ್ತದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ