Breaking News

ಮೋದಿ ಮನ್ ಕಿ ಬಾತ್‍ ಹೈಲೈಟ್ಸ್ …………..

Spread the love

ನವದೆಹಲಿ, ನ.29- ಕೃಷಿ ಕ್ಷೇತ್ರದ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ರೈತ ಸಮುದಾಯದ ಅವಕಾಶಗಳನ್ನು ಮತ್ತಷ್ಟು ಹೆಚ್ಚಿಸಲಿವೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ.

ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿರುವ ಮನ್ ಕಿ ಬಾತ್‍ನ 71ನೇ ಸರಣಿಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವ ಹಲವಾರು ಕಾಯ್ದೆಗಳು ಕೃಷಿ ವಲಯವನ್ನು ಉನ್ನತ ಮಟ್ಟಕ್ಕೇರಿಸುವ ಜತೆಗೆ ರೈತರ ಅವಕಾಶಗಳನ್ನು ಮತ್ತಷ್ಟು ವಿಸ್ತರಿಸಲಿದೆ ಎಂದು ಹೇಳಿದರು.

ಎಪಿಎಂಸಿ ತಿದ್ದುಪಡಿ ಸೇರಿದಂತೆ ಹಲವಾರು ಕೃಷಿ ಸಂಬಂತ ಕಾನೂನುಗಳನ್ನು ಬದಲಾವಣೆಯನ್ನು ವಿರೋಸಿ ದೆಹಲಿಯಲ್ಲಿ ಪಂಜಾಬ್‍ನ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಮೋದಿ ಅವರು ಕೃಷಿ ಸುಧಾರಣೆಗಳ ಬಗ್ಗೆ ಮಾತನಾಡಿರುವುದು ಕುತೂಹಲ ಕೆರಳಿಸಿದೆ.

ಸಂಸತ್ ಕೃಷಿ ಸುಧಾರಣೆಗೆ ನಿರ್ದಿಷ್ಟ ರೂಪ ನೀಡಿದೆ. ಇವು ರೈತರನ್ನು ಬಂದ ಮುಕ್ತಗೊಳಿಸಿವೆ. ಹೊಸ ಹಕ್ಕುಗಳು ಅವಕಾಶಗಳನ್ನು ಸೃಷ್ಟಿಸಿವೆ ಎಂದು ಹೇಳಿದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ