Breaking News

ರೈತರ ಹೋರಾಟದಲ್ಲಿ ಕಾರಿಗೆ ಬೆಂಕಿ : ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

Spread the love

ಹೊಸದಿಲ್ಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾನೆ.

ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ. ಪಂಜಾಬ್ ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಜನಕರಾಜ್ (55) ಮೃತ ವ್ಯಕ್ತಿ.

ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್​ ಮೆಕಾನಿಕ್​ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್​ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ ತನ್ನ ಕೆಲಸ ಮುಗಿಸಿದ ಆತ ಕಾರಿನಲ್ಲಿ ನಿದ್ರೆಗೆ ಜಾರಿದ್ದಾನೆ. ಈ ಸಮಯದಲ್ಲಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಾರಿನಲ್ಲಿದ್ದ ಜನಕ ರಾಜ್​ ಅಲ್ಲಿಯೇ ಸಜೀವ ದಹನವಾಗಿದ್ದಾನೆ.


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ