Breaking News

ಚುನಾವಣೆ ಅಂದ್ರೆ ಏನು ಅಂತ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೋರಿಸುತ್ತೇವೆ: ಪ್ರಜ್ವಲ್ ರೇವಣ್

Spread the love

ಹಾಸನ: ಚುನಾವಣೆ ಅಂದ್ರೆ ಏನು ಅಂತ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ರಸ್ತೆ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ತಂದಿರುವ ಅನುದಾನಕ್ಕೆ ಶಾಸಕ ಪ್ರೀತಂಗೌಡ ಗುದ್ದಲಿ ಪೂಜೆ ಮಾಡುತ್ತಿದ್ದಾರೆ. ಎಂಪಿ ಅನುದಾನದಲ್ಲಿ ಎಂಪಿಯವರ ಸಹಿ ಇಲ್ಲದೆ ರಸ್ತೆ ಮಂಜೂರಾತಿ ಆಗಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ಅವರು ತಂದ ಅನುದಾನವನ್ನು ನಾವೇನು ಹೋಗಿ ಪೂಜೆ ಮಾಡಲ್ಲ. ನಾವು ತಂದಿರುವ ಅನುದಾನದಲ್ಲಿ ಈಗಾಗಲೇ ಒಂದು ಬದಿಯಿಂದ ಅರ್ಧ ಕೆಲಸ ಆಗಿದೆ. ಅಂತಹ ಕಾಮಗಾರಿಗೆ ಮತ್ತೊಂದು ಬದಿಯಿಂದ ಪ್ರೀತಂಗೌಡ ಪೂಜೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಹಾಸನ ತಾಲೂಕಿಗೆ ಬಂದಿರೋದು ನಮ್ಮ ದುರಾದೃಷ್ಟ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ