Breaking News

ಮಂತ್ರಾಲಯದಲ್ಲಿ ತೆಪ್ಪೋತ್ಸವ ಸಂಭ್ರಮ

Spread the love

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಇಂದು ತುಂಗಾರತಿ ಸಂಭ್ರಮ ಮನೆ ಮಾಡಿತ್ತು. ಕಾರ್ತಿಕ ಪೂರ್ಣಮೆ ಹಿನ್ನೆಲೆ ತುಂಗಭದ್ರಾ ನದಿಯಲ್ಲಿ ತೆಪ್ಪೋತ್ಸವ ನೆರವೇರಿಸಲಾಯಿತು.

ಉತ್ಸವಮೂರ್ತಿ ಪ್ರಹ್ಲಾದ ರಾಜರಿಗೆ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತುಂಗಭದ್ರಾ ನದಿಯಲ್ಲಿ ಪ್ರಹ್ಲಾದರಾಜರ ತೆಪ್ಪೋತ್ಸವ ಜರುಗಿತು.

ಕಾರ್ತಿಕ ಪೂರ್ಣಮೆ ಹಿನ್ನೆಲೆ ನದಿ ದಡದಲ್ಲಿ ಭಕ್ತರಿಂದ ದೀಪೋತ್ಸವ ನಡೆದಿದೆ. ಈ ವರ್ಷ ತುಂಗಭದ್ರಾ ನದಿಯಲ್ಲೆ ಪುಷ್ಕರ ಇರುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ನವೆಂಬರ್ 20 ರಿಂದ ಆರಂಭವಾದ ಪುಷ್ಕರ ನಾಳೆ ಅಂತ್ಯವಾಗಲಿದ್ದು, ಮಂತ್ರಾಲಯ ಶ್ರೀ ಮಠದಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ನಡೆಯಲಿದೆ.


Spread the love

About Laxminews 24x7

Check Also

ಮಾಜಿ ಸಚಿವನಿಗೆ ನವಿಲಿನ ಗರಿ ಹಾರ ಹಾಕಿದ ಅಭಿಮಾನಿಗಳು; ದೂರು ದಾಖಲಾಗ್ತಿದ್ದಂತೆ ಸ್ಪಷ್ಟನೆ ಕೊಟ್ಟ ಶಿವನಗೌಡ ನಾಯಕ್​​

Spread the love ರಾಯಚೂರು : ಮಾಜಿ ಸಚಿವ ಕೆ. ಶಿವನಗೌಡ ನಾಯಕ ಜನ್ಮದಿನದಂದು ಅಭಿಮಾನಿಗಳು ನವಿಲುಗರಿ ಹಾರ ಹಾಕಿರುವ ವಿಚಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ