Breaking News

ಸಚಿವರಾಗಲು ಎಚ್.ವಿಶ್ವನಾಥ್ ಅನರ್ಹ ಎಂದು ಹೈಕೋರ್ಟ್ ತೀರ್ಪು ದುರದೃಷ್ಟಕರ: ಆರ್.ಅಶೋಕ್

Spread the love

ಚಾಮರಾಜನಗರ: ಸಚಿವರಾಗಲು ಎಚ್.ವಿಶ್ವನಾಥ್ ಅನರ್ಹ ಎಂದು ಹೈಕೋರ್ಟ್ ತೀರ್ಪು ನೀಡಿರುವುದು ದುರದೃಷ್ಟಕರವಾಗಿದ್ದು, ಮುಂದೆ ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವನಾಥ್ ಪರ ಬ್ಯಾಟಿಂಗ್ ಮಾಡಿದರು.ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಾತನಾಡಿದ ಅವರು, ಎಚ್.ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ. ಅವರ ಪರವಾಗಿ ಪಕ್ಷ ಕೂಡ ನಿಲ್ಲುತ್ತದೆ. ವಿಶ್ವನಾಥ್ ಪರ ತೀರ್ಪು ಬರುತ್ತೆದೆ ಎಂಬ ಭರವಸೆ ಇತ್ತು ಎಂದು ತಿಳಿಸಿದರು.

ಹೋರಾಟ ನಡೆಸಲು ಈಗಾಗಲೇ ಕಾನೂನು ತಜ್ಞರ ಜೊತೆ ಸಹ ಸಮಾಲೋಚನೆ ನಡೆಸಿದ್ದೇವೆ. ವಿಶ್ವನಾಥ್ ಪರ ತೀರ್ಪು ಬರುತ್ತದೆ ಎಂಬ ಖುಷಿ ಇತ್ತು. ಆದರೆ 2023ರ ವರೆಗೆ ಮಂತ್ರಿಯಾಗಲು ಬರುವುದಿಲ್ಲ ಎಂಬ ನ್ಯಾಯಾಲಯದ ತೀರ್ಪು ನಿಜವಾಗ್ಲೂ ಬೇಸರ ತರಿಸಿದೆ ಎಂದರು.

ವಿಶ್ವನಾಥ್ ಅವರನ್ನು ಮಂತ್ರಿ ಮಾಡಲು ಸಿಎಂ ಯಡಿಯೂರಪ್ಪ ಸಹ ಮನಸ್ಸು ಮಾಡಿದ್ದರು. ಈ ಸರ್ಕಾರ ಬರಲು ವಿಶ್ವನಾಥ್ ಕೂಡ ಕಾರಣವಾಗಿದ್ದು, ಅವರ ಪರ ಕಾನೂನು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ