Breaking News

ಕಾಂಗ್ರೆಸ್ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ.: ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷ ರೈತರ ಪರವಾಗಿ ನಿಲ್ಲುತ್ತದೆ. ಅವರಿಗೆ ಎಲ್ಲ ಸಂದರ್ಭದಲ್ಲಿಯೂ ನಾನು  ಸಂಪೂರ್ಣ ಬೆಂಬಲ ಸೂಚಿಸುತ್ತೇನೆ. ಕೇಂದ್ರ ಸರ್ಕಾರ ಕೂಡಲೇ ರೈತರ ಸಮಸ್ಯೆ ಆಲಿಸಿಬೇಕು ಎಂದುಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು,  ದೆಹಲಿಯಲ್ಲಿ ನಡೆಯುವಂತಹ ರೈತರ ಪ್ರತಿಭಟನೆ ಇಡೀ ದೇಶದ ಗಮನ ಸೆಳೆದಿದೆ. ನಿಜವಾಗಿಯೂ ಅವರ ಹೋರಾಟ ನ್ಯಾಯ ಸಮ್ಮತವಾಗಿದೆ. ಕೇಂದ್ರ ಸರ್ಕಾರ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದರು.

ಕಳೆದ 6 ದಿನಗಳಿಂದ ರೈತರು ಪ್ರತಿಭಟನೆ ನಡೆಸಿದ್ದಾರೆ. ಆದ ಕಾರಣ ಕೇಂದ್ರ ಸರ್ಕಾರ ಅನ್ನದಾತರ ಸಮಸ್ಯೆಯನ್ನು ಆಲಿಸಿ, ಪರಿಹಾರ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಜತೆಗೆ ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ