Breaking News

ವಾಶಿಂಗ್ ಮಷಿನ್ ರಿಪೇರಿ ನೆಪದಲ್ಲಿ ಮಹಿಳೆಯ ಮೇಲೆ  ಮಾರಣಾಂತಿಕ ಹಲ್ಲೆ

Spread the love

ಬೆಳಗಾವಿ:  ವಾಶಿಂಗ್ ಮಷಿನ್ ರಿಪೇರಿ ಮಾಡುವ ನೆಪದಲ್ಲಿ  ಮನೆಗೆ ಬಂದು ಮಹಿಳೆಯ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ  ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಕಂಗ್ರಾಳಿ ಕೆ.ಎಚ್. ವಿಶಾಲ ಗಲ್ಲಿಯ ಮಾರುತಿ ಪರಶುರಾಮ ಜಾಧವ (೨೬), ವೈಭವ ನಗರದ ಶುಭಂ ರಾಜು ಬಾತಖಂಡೆ (೨೫) ಬಂಧಿತರು.

 ನ. 30 ರಂದು ರಾತ್ರಿ 9 ಗಂಟೆಗೆ ಶಿವಾಜಿ ನಗರದ ಶೋಭಾ ಗುರುರಾವ್ ಕಾಥವಟೆ ಎಂಬುವವರ ಮನೆಗೆ ವಾಶಿಂಗ್ ಮಶಿನ್ ರಿಪೇರಿ  ಮಾಡುವುದಾಗಿ  ಬಂಧಿತ ಇಬ್ಬರು ಆಗಮಿಸಿದ್ದು, ಶೋಭಾ ಅವರ ಬಾಯಿ ಮುಚ್ಚಿ ಹಲ್ಲೆ ಮಾಡಿದ್ದಾರೆ. ಕೊರಳಲ್ಲಿಯ ಬಂಗಾರದ ಮಂಗಳಸೂತ್ರ, ಬಂಗಾರದ ಚೈನ್, ಬಂಗಾರದ ಬಳೆಗಳನ್ನು ಅಪಹರಿಸಿದ್ದಾರೆ.

ಶೋಭಾ ಅವರ ಪತಿ ಗುರುರಾವ ಕಾಥವಟೆ ಅವರ ತಲೆ ಜಜ್ಜಿ  ಗಾಯಗೊಳಿಸಿದ್ದರು. ಅವರ ಕೊರಳಲ್ಲಿಯ ಬಂಗಾರದ ಚೈನ್, ಕೈಬೆರಳಲ್ಲಿಯ ಬಂಗಾರದ ಉಂಗುರ ಹಾಗೂ 25 ಸಾವಿರ ರೂ.ನಗದು ತೆಗೆದುಕೊಂಡು ಪರಾರಿಯಾಗಿದ್ದರು. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ಆಧರಿಸಿ ಆರೋಪಿತರನ್ನು ಪೊಲೀಸರು ಬಂಧಿಸಿದ್ದು,  3.45 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ