Breaking News
Home / Uncategorized / ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ

ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ

Spread the love

ನವದೆಹಲಿ: ಕೃಷಿ ಮಸೂದೆ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ ನಡೆಯಲಿದ್ದು, ಈ ನಡುವಲ್ಲೇ ಕೇಂದ್ರ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ರಾಜಧಾನಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿವಾಸಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್,  ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಅವರು ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಕೃಷಿ ಸಚಿವ ತೋಮರ್ ಅವರು, ರೈತರೊಂದಿಗೆ ಇಂದು ಮಧ್ಯಾಹ್ನ 2 ಗಂಟೆಗೆ ಮಾತುಕತೆ ನಡೆಯಲಿದೆ. ಇಂದು ನಡೆಯುವ ಮಾತುಕತೆ ವೇಳೆ ರೈತರಿಂದ ಧನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Spread the loveಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ