Breaking News

ಬೆಳಗಾವಿಯಿಂದ ಬೆಂಗ್ಳೂರಿಗೆ ಒಂದೇ ವಿಮಾನದಲ್ಲಿ ಉಭಯ ನಾಯಕರ ಪ್ರಯಾಣ

Spread the love

ಬೆಳಗಾವಿ: ಕುಂದಾ ನಗರಿಯಿಂದ ಬೆಂಗಳೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸಿಎಂಗಳಾದ ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪ್ರಯಾಣ ಬೆಳೆಸಿದ್ದಾರೆ.ಬೆಳಗಾವಿಯಿಂದ 7.40ಕ್ಕೆ ಹೊರಟ ಏರ್ ಇಂಡಿಯಾ ವಿಮಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಜೊತೆಯಾಗಿ ಫ್ಲೈಟ್ ಏರಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಸಿಎಂ ಸೇರಿದಂತೆ ಬಹುತೇಕ ಎಲ್ಲ ಕಮಲ ನಾಯಕರು ಬೆಳಗಾವಿಗೆ ಆಗಮಿಸಿದ್ದರು. ಇತ್ತ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಮಹಲಿಂಗಪುರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದರು.

ಎರಡೂ ಪಕ್ಷದ ಉಭಯ ನಾಯಕರು ಬೆಂಗಳೂರಿಗೆ ಹಿಂದಿರುಗುವ ವೇಳೆ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾಗಿದ್ದಾರೆ. ಜೊತೆಯಲ್ಲಿ ಒಂದೇ ವಿಮಾನ ಏರಿ ಬೆಂಗಳೂರಿನತ್ತ ಆಗಮಿಸಿದ್ದಾರೆ.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ