Breaking News

ನವದೆಹಲಿ:ಲಾಕ್‌ಡೌನ್‌ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ.:ನರೇಂದ್ರ ಮೋದಿ

Spread the love

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹೇರಿರುವ ಲಾಕ್‌ಡೌನ್‌ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಕಟ್ಟುನಿಟ್ಟಿನ ಆದೇಶವನ್ನು ಜನರು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದ 80ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿವೆ. 400ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ದೇಶದಲ್ಲಿ ಈ ವರೆಗೆ ಕೊರೊನಾಗೆ 8 ಜನ ಮೃತಪಟ್ಟಿದ್ದಾರೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ಮಾರ್ಚ್‌ 31ರ ವರೆಗೆ ಲಾಕ್‌ಡೌನ್ ಘೋಷಿಸಿದೆ. ಆದರೆ, ಕೆಲವು ರಾಜ್ಯಗಳು ಇದನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಪ್ರಧಾನಿ ಮೋದಿ ಆಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, ಅನೇಕರು ಈ ಲಾಕ್‌ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ಕಟ್ಟುನಿಟ್ಟಿನ ಈ ನಿಯಮ ಅನುಸರಿಸುವ ಮೂಲಕ ನಿಮ್ಮ ಮತ್ತು ನಿಮ್ಮ ಕುಟುಂಬದ ಜೀವ ಉಳಿಸಿ. ಈ ನಿಯಮ ಮತ್ತು ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಾನು ರಾಜ್ಯಗಳನ್ನು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ