Breaking News
Home / ಜಿಲ್ಲೆ / ಚಾಮರಾಜನಗರಕ್ಕೆ ಭೇಟಿ ನೀಡಲು ನನಗೆ ಮೂಢನಂಬಿಕೆ ಕಾಡಲ್ಲ : ಕಾರಜೋಳ

ಚಾಮರಾಜನಗರಕ್ಕೆ ಭೇಟಿ ನೀಡಲು ನನಗೆ ಮೂಢನಂಬಿಕೆ ಕಾಡಲ್ಲ : ಕಾರಜೋಳ

Spread the love

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.23- ಚಾಮರಾಜನಗರಕ್ಕೆ ಭೇಟಿ ನೀಡಲು ತಮಗೆ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು, ನೀವು ನಮ್ಮ ಜಿಲ್ಲೆಗೆ ಬರುತ್ತಿರೋ ಇಲ್ಲವೋ ಆಗ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ. ಎಲ್ಲ ಕಡೆಗೂ ಬರುತ್ತೇನೆ ಎಂದು ಹೇಳಿದರು.

ಚಾಮರಾಜನಗರ ಪಟ್ಟಣ ಪರಿಮಿತಿಯಲ್ಲಿ ಚತುಷ್ಪದ ರಸ್ತೆಯನ್ನಾಗಿ ಅಗಲೀಕರಣಗೊಳಿಸುವ ಕಾಮಗಾರಿ ಪ್ರಾರಂಭಿಸಲಾಗಿದ್ದು, ಕಳೆದ 2019ರ ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾಗಬೇಕಿತ್ತು. 35 ಕೋಟಿ ರೂ. ಅಂದಾಜು ವೆಚ್ಚದ ಈ ರಸ್ತೆ ಅಭಿವೃದ್ಧಿಪಡಿಸಲು ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ