Breaking News

ಭಾರತ್ ಬಂದ್; ಬೆಳಗಾವಿಯಲ್ಲಿ ಬಸ್ ಇಲ್ಲದೆ ಪ್ರಯಾಣಿಕರ ಪರದಾಟ

Spread the love

ಬೆಳಗಾವಿ : ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ನಗರದಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ಉಂಟಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

 

 

ಬಸ್ ನಿಲ್ದಾಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ನೂರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ಕುರಿತು ಕೆಎಸ್‍ಆರ್‍ಟಿಸಿ ಡಿಸಿ ಎಂ ಆರ್ ಮುಂಜಿ ಮಾತನಾಡಿ, ರೈತರ ಪ್ರತಿಭಟನೆಯಿಂದಾಗಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ನೂರಾರು ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ರೈತರು ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ