Breaking News

ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡೋದು”

Spread the love

ಬೆಂಗಳೂರು,ಡಿ.10- ರಾಜ್ಯದ ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಕಲಾಪ ಬಹಿಷ್ಕಾರ ಮಾಡಿದರೆ ಇವರೇ ಇವರ ಮುಖದ ಮೇಲೆ ಉಗುಳಿಕೊಂಡಂತೆ ಎಂದು ಟೀಕೆ ಮಾಡಿರುವ ಅವರು, ಕಾಂಗ್ರೆಸ್ ನವರು ಬೆದರಿಕೆ ಹಾಕ್ತಾರೇನು? ಒಂದು ಸಲ ಪಶ್ಚಾತ್ತಾಪದ ಧ್ವನಿಯಲ್ಲಿ ಮಾತಾನಾಡುತ್ತಾರೆ. ಮತ್ತೊಂದು ಸಲ ಗೋ ಹತ್ಯೆ ನಿಷೇಧ ಕಾಯ್ದೆ ವಿರೋಧಿಸುತ್ತಾರೆ.

ಕಾಂಗ್ರೆಸ್‍ನವರಿಗೆ ಒಂದು ನಿರ್ದಿಷ್ಟ ನಿಲುವೇ ಇಲ್ಲ ಎಂದು ಟೀಕಿಸಿದರು. ಯಾವ ಕಾಂಗ್ರೆಸ್‍ನವರು ನೀವು? ಮಹಾತ್ಮಾ ಗಾಂಧಿ ಮರೆತ ಕಾಂಗ್ರೆಸ್ಸೇ? ದನಗಳ್ಳರ ಪರ, ದನ ಕಡಿಯುವವರ ಪರ ನಿಂತಿರುವ ಕಾಂಗ್ರೆಸ್ಸೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‍ನವರು ಕೃಷಿ ಸಂಸ್ಕøತಿ ಎತ್ತಿ ಹಿಡಿಯಬೇಕು. ಕೃಷಿ ಸಂಸ್ಕೃತಿಗೆ ಬೆನ್ನೆಲುಬಾದ ಗೋ ಸಮೂಹ ಎತ್ತಿ ಹಿಡಿಬೇಕಾದದ್ದು ಎಲ್ಲರ ಕರ್ತವ್ಯ. ಕಾಂಗ್ರೆಸ್ ನವರ ಗೂಸೆಂಬುತನ ಬಯಲಾಗುತ್ತಿದೆ. ದನ ಕಾಯುವವರು ಯಾರೂ ದನ ಕೊಲ್ಲುವುದಕ್ಕೆ ಬೆಂಬಲ ಕೊಡಲ್ಲ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್‍ನವರು ಒಂದು ಸಲ ದನ ಕಾಯ್ತೀನಿ ಅಂತಾರೆ, ಇನ್ನೊಂದು ಸಲ ದನ ಕಡಿಯುವ ಬಗ್ಗೆಯೂ ಮಾತಾಡುತ್ತಾರೆ ಎಂದು ಸಿ.ಟಿ.ರವಿ ಹಾಸ್ಯಟೀಕೆ ಮಾಡಿದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ