Breaking News

ಕೊಲೆ ಆರೋಪಿಯನ್ನೇ ಮುಗಿಸಲು ಸ್ಕೆಚ್ ಹಾಕಿದ್ರಾ ಮಾಜಿ ಸಚಿವರ ತಂಡ?

Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆ ಮುಂದುವರಿದಿದೆ. ತನಿಖೆಯಲ್ಲಿ ಬೆಚ್ಚಿಬೀಳಿಸುವ ವಿಚಾರಗಳು ಬಯಲಿಗೆ ಬರುತ್ತಿವೆ. ಕೊಲೆ ಆರೋಪದ ಮೇಲೆ ಜೈಲಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಿರುವ ಕೊಲೆ ಆರೋಪಿಯನ್ನೇ ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಸಿಬಿಐ ತನಿಖೆ ವೇಳೆ ಈ ರಣರೋಚಕ ವಿಚಾರ ಬಹಿರಂಗ ಗೊಂಡಿದೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುತ್ತಿದ್ದಂತೆ ಕೊಲೆ ಆರೋಪಿ ಬಸವರಾಜ್ ಮುತ್ತಗಿ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಸಾಕ್ಷ್ಯ ಮುಚ್ಚಿ ಹಾಕಲು ಬಸವರಾಜ್ ಮುತ್ತಗಿ ಕೊಲೆಗೆ ಸ್ಕೆಚ್ ನಡೆದಿತ್ತು ಎನ್ನುವ ಭಯಾನಕ ವಿಚಾರವನ್ನು ಸಿಬಿಐ ಪತ್ತೆ ಹಚ್ಚಿದೆ. ಯೋಗೇಶ್ ಗೌಡ ಕೊಲೆ‌ ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿಯನ್ನು ಹತ್ಯೆ ಮಾಡುವ ಮೂಲಕ ಪ್ರಕರಣದ ಹಾದಿ ತಪ್ಪಿಸಲು ಯತ್ನಿಸಲಾಗಿತ್ತು. ಒಂದೇ ಕಲ್ಲಿಗೆ ಎರಡು ಹಕ್ಕಿಗಳನ್ನು ಹೊಡೆಯುವ ಪ್ಲ್ಯಾನ್‌ನ್ನು ವಿನಯ ಕುಲಕರ್ಣಿ ಆ್ಯಂಡ್ ಟೀಮ್ ಮಾಡಿದ್ದರಂತೆ.ಬಸವರಾಜ ಮುತ್ತಗಿಯನ್ನು ಹತ್ಯೆ ಮಾಡಿದರೆ ಸುಪಾರಿ ವಿಚಾರವನ್ನು ಮುಚ್ಚಿ ಹಾಕಬಹುದು. ಬಸವರಾಜ ಮುತ್ತಗಿ ಹತ್ಯೆಯ ಕೇಸ್‌ನ್ನು ಯೋಗೇಶ್‌ಗೌಡ ಅಣ್ಣ ಗುರುನಾಥ ಗೌಡರ ತಲೆಗೆ ಕಟ್ಟುಬಹುದು ಎನ್ನುವ ಹುನ್ನಾರ ನಡೆದಿತ್ತಂತೆ. ಬಸವರಾಜ ಮುತ್ತಗಿ ಹತ್ಯೆಗೆ ಬೆಂಗಳೂರಿನ ನಟೋರಿಯಸ್ ರೌಡಿಯೊಬ್ಬನನ್ನು ಮಾಜಿ ಸಚಿವರ ತಂಡ ಸಂಪರ್ಕಿಸಿತ್ತು. ಧಾರವಾಡ ಮೂಲದ ಚಲನಚಿತ್ರ ನಟಿಯನ್ನು ಮದುವೆಯಾಗಿರುವ ಬೆಂಗಳೂರಿನ ರೌಡಿಶೀಟರ್‌ನನ್ನು ಸುಪಾರಿ ಕೊಲೆ ಮಾಡುವಂತೆ ಸಂಪರ್ಕಿಸಲಾಗಿತ್ತು. ಚಂದ್ರಶೇಖರ ಇಂಡಿ, ವಿನಯ್ ಕುಲಕರ್ಣಿ ಹಾಗೂ ಮಧ್ಯವರ್ತಿಯೊಬ್ಬನ ಫೋನ್ ಕರೆಗಳ ವಿವರವನ್ನು ಸಿಬಿಐ ಅಧಿಕಾರಿಗಳು ಕಲೆ ಹಾಕಿದ್ದಾರೆ. ಕರೆಗಳ ಸಂಪೂರ್ಣ ಪಟ್ಟಿಯನ್ನು ಚಂದ್ರಶೇಖರ ಇಂಡಿ‌ ಮುಂದಿಟ್ಟು ವಿಚಾರಣೆ ನಡೆಸಿದಾಗ ಈ ಎಲ್ಲಾ ಅಂಶಗಳು ಬಯಲಾಗಿವೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ