“ನಮ್ಮ ಬೆಳಗಾವಿಯ ಜನರ ಸೇವೆಗೆ 9 ಹೈಟೆಕ್ ಬಸ್’ಗಳ ಲೋಕಾರ್ಪಣೆ”
ಇಂದು ನಗರದ ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ನೂತನ ಒಬ್ಬತ್ತು ಹೈಟೆಕ್ ಬಸ್ ಗಳಿಗೆ ಪೂಜೆ ನೆರವೇರಿಸಿ ಬಸ್ ಸಂಚಾರಕ್ಕೆ ಚಾಲನೆ ನೀಡಲಾಯಿತು. ಬಳಿಕ ನೂತನ ಮಲ್ಟಿ ಎಕ್ಸಿಲ್ ಬಸ್ ನಲ್ಲಿ ಸುವರ್ಣ ವಿಧಾನಸೌಧಕ್ಕೆ ಪ್ರಯಾಣಿಸಲಾಯಿತು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಮಹಾಂತೇಶ ದೊಡಗೌಡ್ರ, ಮಹೇಶ್ ಕುಮಠಳ್ಳಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್.ಮುಂಜಿ ಅವರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Laxmi News 24×7