Breaking News
Home / ಅಂತರಾಷ್ಟ್ರೀಯ / ಸಂಸತ್ ನ ಈ ವರ್ಷದ ಚಳಿಗಾಲದ ಅಧಿವೇಶನ ರದ್ದು

ಸಂಸತ್ ನ ಈ ವರ್ಷದ ಚಳಿಗಾಲದ ಅಧಿವೇಶನ ರದ್ದು

Spread the love

ಹೊಸದಿಲ್ಲಿ: ಕೊರೋನ ವೈರಸ್ ಹಾವಳಿಯ ಕಾರಣಕ್ಕೆ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಕೋವಿಡ್-19 ಹರಡುವುದನ್ನು ತಡೆಯಲು ಹಾಗೂ ಜನವರಿಯಲ್ಲಿ ನೇರವಾಗಿ ಬಜೆಟ್ ಅಧಿವೇಶನ ನಡೆಸುವ ಉದ್ದೇಶದಿಂದ ಚಳಿಗಾಲದ ಅಧಿವೇಶನ ರದ್ದುಪಡಿಸುವ ಕುರಿತಂತೆ ಸರ್ವಪಕ್ಷಗಳು ಒಲವು ಹೊಂದಿವೆ ಎಂದು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ದಿಲ್ಲಿಯ ಹೈವೇಗಳಲ್ಲಿ ಸಾವಿರಾರು ರೈತರು ವಿವಾದಾತ್ಮಕ ರೈತ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡಸುತ್ತಿರುವ ಕಾರಣ ಕಾಯ್ದೆ ಕುರಿತು ಚರ್ಚಿಸಲು ಅಧಿವೇಶನ ನಡೆಸಬೇಕೆಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಬರೆದಿರುವ ಪತ್ರಕ್ಕೆ ಜೋಶಿ ಈ ಉತ್ತರ ನೀಡಿದ್ದಾರೆ.

ಎಲ್ಲ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಲಾಗಿದೆ ಹಾಗೂ ಕೋವಿಡ್-19 ಕಾರಣಕ್ಕೆ ಅಧಿವೇಶನವನ್ನು ಕರೆಯದಿರಲು ಒಮ್ಮತವಿದೆ ಎಂದು ಜೋಶಿ ಹೇಳಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ