ಸಾರ್ವಜನಿಕರ ಎದುರೇ ಉಜಿರೆಯ ಬಾಲಕನ ಕಿಡ್ನಾಪ್- ಮಾಹಿತಿ ಕೊಡಲು ಸ್ಥಳೀಯರು ಕೋರಿಕೆಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 8 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ.ಸಾರ್ವಜನಿಕರ ಎದುರೇ ದುಷ್ಕರ್ಮಿಗಳು ಉಜಿರೆಯಿಂದ ಬಿಳಿ ಬಣ್ಣದ ಹಾಗೂ ಯಲ್ಲೋ ಬೋರ್ಡ್ ಇದ್ದ ಇಂಡಿಕಾ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದಾರೆ. ಈ ಘಟನೆ ನಿನ್ನೆ ಸಂಜೆ 6.30ರ ಸುಮಾರಿಗೆ ನಡೆದಿದೆ. ಕಾರು ಉಜಿರೆಯಿಂದ ಚಾರ್ಮಾಡಿ ಕಡೆ ಹೋಗಿದೆ
ಕಿಡ್ನಾಪ್ ಬಳಿಕ ಬಾಲಕನ ತಂದೆ ಬಿಜೋಯ್ ಗೆ ಕರೆ ಮಾಡಿದ ದುಷ್ಕರ್ಮಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕರೆ ಮಾಡಿದ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿದ್ದಾನೆ. ಬಾಲಕನ ತಂದೆಯ ಹಣಕಾಸು ವ್ಯವಹಾರ ಸಂಬಂಧ ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.
Laxmi News 24×7