ಬೆಳಗಾವಿ: ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ’ ಅವರ ಜಯಂತೋತ್ಸವ ನಿಮಿತ್ತ ಗೋಕಾಕ್ ನಗರದಲ್ಲಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ವಿಜೇತರಾಗುವ 10 ಯುವಕರಿಗೆ ತಮ್ಮ ಹೆಲಿಕಾಪ್ಟರ್ನಲ್ಲಿ ಓಡಾಡಲು ಅವಕಾಶ ಕಲ್ಪಿಸುವುದಾಗಿ ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದ ಸಂಘಟನೆ ತಿಳಿಸಿದೆ.
ಸತೀಶ್ ಜಾರಕಿಹೊಳಿ ನೇತೃತ್ವದ ಮಾನವ ಬಂಧುತ್ವ ವೇದಿಕೆ ಸಂಘಟನೆ ‘ಸಾವಿತ್ರಿಬಾಯಿ ಫುಲೆ ಅವರ ಹೋರಾಟ’ ಮತ್ತು ‘ಮಹಿಳಾ ಶಿಕ್ಷಣಕ್ಕೆ ಅವರ ಕೊಡುಗೆ’ ಎಂಬ ವಿಷಯದ ಮೇಲೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ 25 ವರ್ಷದೊಳಗಿನವರು ಭಾಗವಹಿಸಿಲು ಅವಕಾಶ ನೀಡಲಾಗಿದೆ. ಪ್ರಬಂಧವನ್ನು ಕನ್ನಡ, ಹಿಂದಿ, ಮರಾಠಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಟೈಪ್ ಮಾಡಿ ಕಳುಹಿಸಬಹುದು.
ಅತ್ಯುತ್ತಮವಾಗಿ ಪ್ರಬಂಧ ಬರೆಯುವ 10 ವಿಜೇತರಿಗೆ 2021ರ ಜನವರಿ 10ರಂದು ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ಪತ್ರ ವಿತರಿಸಿ ಸನ್ಮಾನ ಮಾಡಲಾಗುವುದು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ್ ಜಾರಕಿಹೊಳಿಯವರ ಜೋತೆ ಹೆಲಿಕಾಪ್ಟರ್ ನಲ್ಲಿ ಸುತ್ತಾಡಲು ತಿಳಿಸಿದ್ದಾರೆ