Breaking News
Home / ರಾಜ್ಯ / ಲೋಕೋಪಯೋಗಿ ಇಲಾಖೆಯಲ್ಲಿ ಹೊರಗುತ್ತಿಗೆ ಮೂಲಕ 950 ಎಂಜಿನಿಯರ್ ಗಳ ನೇಮಕ: ಗೋವಿಂದ ಕಾರಜೋಳ

ಲೋಕೋಪಯೋಗಿ ಇಲಾಖೆಯಲ್ಲಿ ಹೊರಗುತ್ತಿಗೆ ಮೂಲಕ 950 ಎಂಜಿನಿಯರ್ ಗಳ ನೇಮಕ: ಗೋವಿಂದ ಕಾರಜೋಳ

Spread the love

ಧಾರವಾಡ(ಡಿಸೆಂಬರ್​​.22): ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನಿಯರ್ ಗಳ ಕೊರತೆ ಇದೆ, ಹೊರಗುತ್ತಿಗೆ ಮೂಲಕ 950 ಇಂಜಿನಿಯರ್ ಗಳನ್ನ ತೆಗೆದುಕೊಳ್ಳಲು ಕ್ರಮ ವಹಿಸಲಾಗಿದೆ. ಏಜೆನ್ಸಿಯಿಂದ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಧಾರವಾಡದಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿ ಅವರು, ರಾಜ್ಯದಲ್ಲಿನ ಟೂರಿಸಂ ಪ್ರದೇಶಗಳಲ್ಲಿನ ಪ್ರವಾಸಿ ಮಂದಿರಗಳನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲಾಗುತ್ತದೆ. ಇದರಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಅಲ್ಲದೇ ಲೋಕೋಪಯೋಗಿ ಇಲಾಖೆಗೂ ಸಹ ಪ್ರವಾಸೋದ್ಯಮ ಇಲಾಖೆ ಬಳಕೆ‌ ಮಾಡಿಕೊಳ್ಳಬಹುದು. ಪ್ರವಾಸಿ‌ ಮಂದಿರಗಳನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿದ್ರೆ ಅವುಗಳ ನಿರ್ವಹಣೆಯನ್ನು ಅವರೇ ಮಾಡುತ್ತಾರೆ. ರಾಜ್ಯದ ವಿಜಯಪುರ, ಬದಾಮಿ ಸೇರಿದಂತೆ ಪ್ರವಾಸಿ ತಾಣಗಳಲ್ಲಿನ‌ ಪ್ರವಾಸಿ ಮಂದಿರನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗುವುದು ಎಂದರು.

ಪ್ರವಾಹ ಹಾಗೂ ಮಳೆಯಿಂದ 2019-20 ರ ಸಾಲಿನಲ್ಲಿ 7 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಈ ವರ್ಷ ಜುಲೈ ನಿಂದ ಅಕ್ಟೋಬರ್ ವರೆಗೆ 3500 ಕೋಟಿ ರೂಪಾಯಿ ಹಾನಿಯಾಗಿದೆ  ಎಂದು ಮಾಹಿತಿ ನೀಡಿದರು.ರಾಜ್ಯದಲ್ಲಿ 2019-20 ರಲ್ಲಿ 35 ಸಾವಿರ ಕೋಟಿ, ಜುಲೈ ನಿಂದ ಅಕ್ಟೋಬರ್ ವರೆಗೆ 25 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ಪರಿಹಾರ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಕಳೆದ ವರ್ಷ 700 ಕೋಟಿ ಹಾಗೂ ಈ ವರ್ಷ 600 ಕೋಟಿ ಬಿಡುಗಡೆ ಮಾಡಿದ್ದೇವೆ. ಈ ತಿಂಗಳು ಅಂತ್ಯದೊಳಗೆ ರಾಜ್ಯದ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಕಳಪೆ ಕಾಮಗಾರಿಗಳು ಕಂಡು ಬಂದಲ್ಲಿ ಹಾಗೂ ಅಧಿಕಾರಿಗಳ ನಿರ್ಲಕ್ಷತೋರಿದರೆ ಕಠಿಣ ಕ್ರಮ‌ ಜರುಗಿಸಲಾಗುತ್ತದೆ ಎಂದರು.

 


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ