Breaking News

ಕಣ್ಣುಮುಚ್ಚಿ ಕುಳಿತ ಸಾಲಾಪುರ ಗ್ರಾಮ ಪಂಚಾಯತಿ ಅಧಿಕಾರಿಗಳು.

Spread the love

 

ಕಳೆದ ಒಂದು ವರ್ಷದಿಂದ ದಾ ಸಾಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ 3 ನೇ ವಾರ್ಡಿನಲ್ಲಿ ರಸ್ತೆಯ ಮೇಲೆ ಚರಂಡಿಯ ನೀರು ಮೊಣಕಾಲು ತನಕ ನಿಂತು ಗಬ್ಬುನಾರುತ್ತಿದೆ. ಇದರಿಂದ ಸೊಳ್ಳೆಗಳು ಹಾಗೂ ಕೀಟನಾಶಕಗಳು ಉತ್ಪತ್ತಿಯಾಗಿ ಸಾರ್ವಜನಿಕರಿಗೆ ಹಲವಾರು ರೋಗಗಳು ಬರುವ ಸಾಧ್ಯತೆ ಇದೆ.

ಈ ಹಿಂದೆ ಸಾರ್ವಜನಿಕರು ಗ್ರಾಮ ಪಂಚಾಯತಿಗೆ ರಸ್ತೆಯ ಮೇಲೆ ನಿಂತ ನೀರನ್ನು ಸರಿಯಾಗಿ ಚರಂಡಿ ಮಾಡಿ ಎಂದು ಗ್ರಾಮ ಪಂಚಾಯತಿ ಯವರಿಗೆ ಹೇಳಿದರೂ ಕೂಡ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ನಿಂತ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ಮತ್ತು ಅದೇ ರಸ್ತೆಯಲ್ಲಿ ಅಂಧರ ಮನೆಗಳಿದ್ದು ಆ ಮನೆಯಲ್ಲಿ ಮೂರು ಜನ ಅಂಧರು ವಾಸ ಮಾಡುತ್ತಿದ್ದು ಅದೇ ರಸ್ತೆಯ ಮೇಲೆ ಹೋಗುವಾಗ ಕಾಲು ಜಾರಿ ಬಿದ್ದು ಅನಾಹುತ ಆಗಿದೆ. ಇದರ ಬಗ್ಗೆ ಸ್ವಲ್ಪ ಗಮನಹರಿಸಿ ನಿಂತ ನೀರನ್ನು ಒಂದು ಕಡೆ ಹೋಗುವ ಹಾಗೆ ದಾರಿ ಮಾಡಿಕೊಡಬೇಕೆಂದು ಗ್ರಾಮ ಪಂಚಾಯಿತಿಗೆ ಮನವಿ ಮಾಡಿಕೊಂಡರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ