Breaking News

ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ: ಹೆಚ್.ಸಿ.ಮಹದೇವಪ್ ವ್ಯಂಗ್ಯ

Spread the love

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಕಾಟಾಚಾರದ ನೈಟ್‍ ಕರ್ಫ್ಯೂಗೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ ವ್ಯಂಗ್ಯವಾಡಿದ್ದಾರೆ. ರಾಜ್ಯ ಸರ್ಕಾರದ ತರ್ಕರಹಿತವಾದ ಕರ್ಫ್ಯೂ ಆದೇಶವನ್ನು ಕಂಡ ನಂತರ ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕರೋನಾನ ಇಲ್ಲ ಗೂಬೆನಾ ಎಂಬ ಅನುಮಾನ ನನ್ನ ಕಾಡತೊಡಗಿದ್ದು ಈ ಮಾತು ಹಾಸ್ಯವಾಗಿ ಕಂಡರೂ ನನ್ನಲ್ಲಿ ದಿಗಿಲು ಹುಟ್ಟಿಸಿದೆ ಟ್ವೀಟ್ ಮೂಲಕ ಹೆಚ್.ಸಿ.ಮಹದೇವಪ್ಪ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
 9 ತಿಂಗಳ ಹಿಂದೆ ಕೊರೊನಾ ತಡೆಗಾಗಿ ಸರ್ಕಾರ ಮಾಡಿಕೊಂಡ ಯಡವಟ್ಟುಗಳು ಮತ್ತೆ ಪುನಾರವರ್ತನೆ ಆದಂತೆ ಭಾಸವಾಗುತ್ತಿದೆ. ಇಂದಿನಿಂದ ನೈಟ್‍ಕರ್ಫ್ಯೂ ಅಂತ ಹೇಳಿದ್ದ ಸರ್ಕಾರ ಸಂಜೆ ನಾಳೆಯಿಂದ ಅಂತ ಮಾರ್ಗಸೂಚಿಯಲ್ಲಿ ಪ್ರಕಟಿದೆ. ಜನಸಂಚಾರ ವಿರಳವಾಗಿರುವ ಮಧ್ಯರಾತ್ರಿ ಸರ್ಕಾರ ನೈಟ್‍ಕರ್ಫ್ಯೂ ಹೇರಿದ್ದು, ಎಲ್ಲ ವಿಧವಾದ ಚಟುವಟಿಕೆಗಳಿಗೂ ಅವಕಾಶ ನೀಡಿದೆ.
 ಸರ್ಕಾರದ ನೈಟ್‍ಕರ್ಫ್ಯೂ ಮಾರ್ಗಸೂಚಿಗಳು
* ರಾಜ್ಯದಲ್ಲಿ ನಾಳೆಯಿಂದ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‍ಕಫ್ರ್ಯೂ ಜಾರಿಯಾಗಲಿದೆ.
* ಜನವರಿ 2ರಂದು ಬೆಳಗ್ಗೆ 5 ಗಂಟೆವರೆಗೆ ನೈಟ್‍ಕರ್ಫ್ಯೂ ಜಾರಿ
* ಕೈಗಾರಿಕೆ, ನೈಟ್ ಶಿಫ್ಟ್ ಆಧರಿತ ಕಂಪೆನಿಗಳಿಗೆ ಶೇ.50 ರಷ್ಡು ನೌಕರರ ಮೂಲಕ ಕಾರ್ಯಾಚರಣೆಗೆ ಅನುಮತಿ. ನೌಕರರು ಕಂಪೆನಿ, ಕೈಗಾರಿಕೆಗಳ ಐಡಿಕಾರ್ಡ್ ತೋರಿಸಿ ಹೋಗಬೇಕು. ಕೈಗಾರಿಕೆಗಳಿಗೆ 24/7 ಕಾರ್ಯನಿರ್ವಹಿಸಲು ಯಾವುದೇ ಅಡ್ಡಿ ಇಲ್ಲ.
* ದೂರದ ಪ್ರಯಾಣದ ಬಸ್ ಮತ್ತು ರೈಲ್ವೇಗಳಿಗೆ ಅನುಮತಿ
* ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಓಲಾ, ಉಬರ್, ಆಟೋಗಳ ಸಂಚಾರಕ್ಕೆ ಅವಕಾಶ
* ಬಸ್‍ನಿಲ್ದಾಣ, ರೈಲು ಸ್ಟೇಶನ್, ಏರ್ ಪೋರ್ಟ್ ಗಳಿಂದ ಪಿಕಪ್, ಡ್ರಾಪ್ ಗೆ ಮಾತ್ರ ಅವಕಾಶವಿದ್ದು, ಅಧಿಕಾರಿಗಳು ಕೇಳಿದಾಗ ಟಿಕೆಟ್ ತೋರಿಸವುದು ಕಡ್ಡಾಯ.
* ಷರತ್ತು, ನಿರ್ಬಂಧಗಳೊಂದಿಗೆ ಹೊಸ ವರ್ಷಾಚರಣೆ, ಕ್ರಿಸ್ ಮಸ್ ಗೆ ಅವಕಾಶ
* ಸರಕು ಸಾಗಣೆ ವಾಹನಗಳಿಗೆ ಯಾವುದೇ ನಿರ್ಬಂಧವಿಲ್ಲ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ