Breaking News

ಮಾಜಿ ಗೆಳತಿಯ ಬಾಳಿಗೆ ಬೆಂಕಿ ಇಟ್ಟ ಪಾಪಿ..!

Spread the love

ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನ ಆಕೆಯ ಮಾಜಿ ಪ್ರಿಯತಮ ಕೊಲೆ ಮಾಡಿ ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರಪ್ರದೇಶ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ.‌

ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಲಾಗಿದ್ದು, ಆಕೆ ಬೇರೆಯವನ ಜೊತೆ ಪ್ರೇಮ ಸಂಬಂಧ ಹೊಂದಿದ್ದನ್ನ ಸಹಿಸಲಾಗದೇ ಈ ರೀತಿ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಗಾರೆ ಕೆಲಸ ಮಾಡಿಕೊಂಡಿದ್ದ ರಾಜೇಶ್​ ಸ್ನೇಹಲತಾ ಎಂಬಾಕೆಯನ್ನ ಪ್ರೀತಿ ಮಾಡುತ್ತಿದ್ದ. ಆದರೆ ಸ್ನೇಹಲತಾ ಗುತ್ತಿಗೆ ಆಧಾರದಲ್ಲಿ ಎಸ್​ಬಿಐನಲ್ಲಿ ಕೆಲಸ ಪಡೆದ ಬಳಿಕ ಈತನಿಂದ ದೂರವಾಗಿದ್ದಳು. ಅಲ್ಲದೇ ತನ್ನ ಸಹಪಾಠಿಯೊಂದಿಗೆ ಆಕೆ ಹತ್ತಿರವಾಗುತ್ತಿದ್ದುದ್ದನ್ನ ಸಹಿಸಲಾಗದೇ ರಾಜೇಶ್​ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಸ್ನೇಹಲತಾಲಳನ್ನ ಭೇಟಿಯಾಗೋದಕ್ಕೆ ಕರೆದ ರಾಜೇಶ್​​, ಆಕೆಯನ್ನ ಬೈಕ್​ನಲ್ಲಿ ಕೂರಿಸಿಕೊಂಡು ಮದನ್​ಪಲ್ಲಿ ಬಳಿ ಇಳಿಸಿದ್ದಾನೆ. ಅಲ್ಲಿ ಆಕೆ ಬೇರೊಬ್ಬನ ಜೊತೆ ಇರೋದರ ಬಗ್ಗೆ ಕ್ಯಾತೆ ತೆಗೆದ ರಾಜೇಶ್​ ಬಳಿಕ ಆಕೆಯನ್ನ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

 


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ