Breaking News

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ವತಿಯಿಂದ ಚಿಗುರು ಕಾರ್ಯಕ್ರಮ

Spread the love

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ವತಿಯಿಂದ ಚಿಗುರು ಕಾರ್ಯಕ್ರಮ -2020 ನ್ನು ಆಯೋಜಿಸಲಾಗಿತ್ತು.

ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಈ ಚಿಣ್ಣರ ಹಬ್ಬವನ್ನು ಬಸವರಾಜ ಕಟ್ಟಿಮನಿ ಸಭಾಗೃಹದಲ್ಲಿ ಆಯೋಜನೆ ಮಾಡಲಾಗಿತ್ತು.

ವೇದಿಕೆಯ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ,ಉತ್ತರ ವಿಭಾಗದ ಶಾಸಕ ಅನಿಲ ಬೆನಕೆ, ವೇಣುಧ್ವನಿ ಬಾನುಲಿಯ ಸುನಿತಾ ದೇಸಾಯಿ,ಪತ್ರಕರ್ತ್ ಮಹೇಶ ವಿಜಾಪುರ & ಗಣ್ಯರು ಆಸಿನರಾಗಿದ್ದರು.

ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಅನಿಲ ಬೆನಕೆ ಮಕ್ಕಳು ವಿದ್ಯೆಯ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ಕೊಟ್ಟರು.

ಈ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ,ಗಾಯನ ಸ್ಪರ್ಧೆ,ಏಕ ಪಾತ್ರಾಭಿನಯ,ಭರತ್ ನಾಟ್ಯ ಕಾರ್ಯಕ್ರಮಗಳು ಜರುಗಿದವು.

ಈ ವೇಳೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಪಾಲಕರು ಹಾಜರಿದ್ದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ