Breaking News

ವಿಷ್ಣುವರ್ಧನ್ ಪ್ರತಿಮೆ ಧ್ವಂಸಕರಿಗೆ ಸುದೀಪ್ ಎಚ್ಚರಿಕೆ

Spread the love

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ ಪ್ರತಿಮೆ ಧ್ವಂಸಕರಿಗೆ ಅಭಿನಯ ಚಕ್ರವರ್ತಿ ರನ್ನ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದು, ನಿಮ್ಮ ಹೆಸರು ತಿಳಿಯುವ ಮೊದಲು ದೇಶ ಬಿಟ್ಟು ಹೋಗಿ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡಿರುವ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ.

ವಿಷ್ಣು ಸರ್ ಪ್ರತಿಮೆ ಧ್ವಂಸಗೊಳಿಸಿರುವ ವಿಷಯ ನನಗೆ ತಡವಾಗಿ ತಿಳಿಯಿತು. ವಿಷ್ಣು ಸರ್ ಅಭಿಮಾನಿಯಾಗಿ ಮೂರ್ತಿಯನ್ನ ಒಡೆದು ಹಾಕಿರೋರಿಗೆ ಕೆಲ ವಿಷಯಗಳನ್ನ ಹೇಳಲು ಇಷ್ಟಪಡುತ್ತೇನೆ. ಮೂರ್ತಿ ಒಡೆದು ಹಾಕಿರುವ ಧ್ವಂಸಕರು ಸಿಕ್ಕರೆ ವಿಷ್ಣು ಸರ್ ಅಭಿಮಾನಿಗಳು ನಿಮ್ಮನ್ನ ಅದಕ್ಕಿಂತ ಹೀನಾಯವಾಗಿ ಒಡೆದು ಹಾಕುತ್ತಾರೆ. ಮೂರ್ತಿ ಒಡೆದು ಹಾಕಿರುವವರು ಮನುಷ್ಯರೇ ಅಲ್ಲ. ಎಲ್ಲಿಯೂ ಸಿಕ್ಕಿ ಹಾಕಿಕೊಳ್ಳದಂತೆ ನೋಡಿಕೊಳ್ಳಿ. ನಿಮ್ಮ ಹೆಸರು ಗೊತ್ತಾದ ದಿನ ಏನು ನಡೆಯುತ್ತೆ ಅದನ್ನ ಯಾರಿಂದಲೂ ತಡೆಯಲು ಆಗಲ್ಲ.


Spread the love

About Laxminews 24x7

Check Also

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ

Spread the loveಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ