Breaking News

ಬೆಳಗಾವಿ ಚೆನ್ನಮ್ಮವೃತ್ತದಲ್ಲಿ ಪ್ರತಿಮೆ ಬಳಿಯಿರುವ ಕನ್ನಡ ಧ್ವಜ ಕಂಬ ಇದ್ದಕ್ಕಿದ್ದಂತೆ ಕಿರಿದಾದ ಘಟನೆ

Spread the love

ಬೆಳಗಾವಿ: ಬೆಳಗಾವಿ ಚೆನ್ನಮ್ಮವೃತ್ತದಲ್ಲಿ ಪ್ರತಿಮೆ ಬಳಿಯಿರುವ ಕನ್ನಡ ಧ್ವಜ ಕಂಬ ಇದ್ದಕ್ಕಿದ್ದಂತೆ ಕಿರಿದಾದ ಘಟನೆ ಹಲವು ಅನುಮಾನಕ್ಕೆ ಕಾರಣವಾಗಿತ್ತು. ಇದು ಕಿಡಿಗೇಡಿಗಳ ಕೃತ್ಯವಿರಬೇಕು ಎಂಬ ಶಂಕೆ ಮೂಡಿತ್ತು. ಆದರೆ ಇದೀಗ ಕಬ್ಬಿನ ವಾಹನ ಡಿಕ್ಕಿಯಾಗಿ ಧ್ವಜ ಕಂಭಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಚೆನ್ನಮ್ಮನ ಪ್ರತಿಮೆ ಬಳಿಯಿರುವ ಕನ್ನಡ ಧ್ವಜ ಕಂಬ ರಾತ್ರಿ ಬೆಳಗಾಗುವಷ್ಟರಲ್ಲಿ ಕಿರಿದಾಗಿದ್ದು, ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಕಿಡಿಗೇಡಿಗಳು ಕಂಭವನ್ನು ಕತ್ತರಿಸಿ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿತ್ತು. ಇದೀಗ ಗೊಂದಲಗಳಿಗೆ ತೆರೆಬಿದ್ದಿದ್ದು, ಕಬ್ಬಿನ ಲಾರಿ ತಗುಲಿ ಹಾನಿಯಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

Spread the love ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ