Breaking News
Home / ರಾಜ್ಯ / ರಾಜೀನಾಮೆ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ..!

ರಾಜೀನಾಮೆ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ..!

Spread the love

ಚಿಕ್ಕಮಗಳೂರು(ಜ.02): 10 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆಮೇಲೆ ಡಿಐಜಿ, ಐಜಿ ಆಗಿ ಎಸಿ ರೂಮಲ್ಲಿ ಕೂತು ಕೆಲಸ ಮಾಡಲು ಆಸಕ್ತಿ ಇಲ್ಲ ಎಂದಾಗ, ಸಿದ್ಧಾರ್ಥ್ ಅಣ್ಣ(ಕೆಫೆ ಕಾಫಿ ಡೇ ಮಾಲೀಕ) ಮಾತ್ರ ಧೈರ್ಯವಾಗಿ ರಾಜೀನಾಮೆ ಕೊಡಿ, ನಾನಿದ್ದೇನೆ ಎಂದಿದ್ದರು. ನನ್ನ ರಾಜೀನಾಮೆಯನ್ನ ನಾವಿಬ್ಬರೂ ಸೇರಿ ನಿರ್ಧಾರ ಮಾಡಿದ್ದು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ಅವರು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ಕೆಫೆ ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಅವರ ಪುತ್ಥಳಿ ನಿರ್ಮಾಣದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದೇ ವೇಳೆ, ಮಾತನಾಡಿದ ಅವರು, ನಾನು ಮತ್ತು ಸಿದ್ಧಾರ್ಥ್ ಹೆಗ್ಡೆ ಅವರ ಕೆಫೆ ಡೇ ಚೇಂಬರ್ ರೂಂನಲ್ಲಿ ಕೂತು ಮೂರೂವರೆ ಗಂಟೆ ಮಾತನಾಡಿದ್ದೆವು. ಇಬ್ಬರು ಕಾರ್ ಡೋರ್ ಓಪನ್ ಮಾಡಿ ಬಿಡುತ್ತಾರೆ. ನಾಲ್ಕು ಜನ ಸೆಲ್ಯೂಟ್ ಮಾಡುತ್ತಾರೆ. ನನಗೆ ಅದರಿಂದ ಸಂತೋಷವಿಲ್ಲ. ಕೃಷಿ ಮಾಡಬೇಕು. ಊರಿಗೆ ಹೋಗಬೇಕು. ಸಾಧಾರಣ ಮನುಷ್ಯನಂತೆ ಬದುಕಬೇಕು ಹಾಗೂ ಸಾಮಾನ್ಯ ಮನುಷ್ಯನ ಜೀವನವನ್ನ ಬದಲಾವಣೆ ಮಾಡಬೇಕು ಎಂದು ಆಸೆ ಸರ್ ಎಂದು ಅವರಿಗೆ ಹೇಳಿದ್ದೆ. ಆಗ ಅವರು, ಧೈರ್ಯವಾಗಿ ಹೇಳಿದ್ದರು. ರಾಜೀನಾಮೆ ಕೊಡಿ ನಾನಿದ್ದೇನೆ ಎಂದಿದ್ದರು ಎಂದು ಸಿದ್ಧಾರ್ಥ್ ಹೆಗ್ಡೆಯವರನ್ನ ನೆನಪಿಸಿಕೊಂಡರುಯಾವ ದಿನದಂದು ಪೇಪರ್ ಟೈಪ್ ಮಾಡಬೇಕು ಎಂದು ನಾವಿಬ್ಬರು ನಿರ್ಧಾರ ಮಾಡಿದ್ದೆವು ಎಂದರು. ರಾಜೀನಾಮೆ ಕೊಟ್ಟ ಬಳಿಕ ಬಾಂಬೆಯಿಂದ ಫೋನ್ ಮಾಡಿದ್ದರು. ಬಹಳ ಕಷ್ಟದ ಕೆಲಸ ಯಾರೂ ಮಾಡಲ್ಲ. ಜನ ನಿಮಗೆ ಮೂರ್ಖ ಎನ್ನಬಹುದು, ಫೂಲ್ ಎನ್ನಬಹುದು. ಆದರೆ, ನನಗೆ ನಿಮ್ಮ ಉದ್ದೇಶ ಏನೆಂದು ಗೊತ್ತು ಎಂದಿದ್ದರು ಎಂದು ಅವರನ್ನು ಸ್ಮರಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ