Breaking News

ಕೃಷಿ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯತ್ತ ಹೊರಟ ಹರಿಯಾಣ ರೈತರ ಮೇಲೆ ಅಶ್ರುವಾಯು ದಾಳಿ

Spread the love

ರೆವಾರಿ : ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರಟುಭಟನೆಯಲ್ಲಿ ಭಾಗಿಯಾಗಲು ಸಾಗುತ್ತಿದ್ದ ಹರ್ಯಾಣದ ರೈತರನ್ನು ರವಿವಾರ ಪೊಲೀಸರು ತಡೆದಿದ್ದಾರೆ. ಈ ವೇಳೆ ಘರ್ಷಣೆ ಉಂಟಾಗಿದ್ದು, ಪೊಲೀಸರು ಅಶ್ರುವಾಯು ಸಿಡಿಸಿದ ಘಟನೆಯೂ ನಡೆಯಿತು.

ರೆವಾರಿ- ಅಲ್ವಾರ್ ಗಡಿಯಲ್ಲಿ ಈ ಘರ್ಷಣೆ ನಡೆದಿದ್ದು, ಪೊಲೀಸರ ತಡೆಯನ್ನು ಮುರಿದು ಮುಂದೆ ಹೋಗಲು ಯತ್ನಿಸಿದ್ದ ರೈತರ ಮೇಲೆ ಪೊಲೀಸರು ಕೆಲವು ಸುತ್ತು ಅಶ್ರುವಾಯು ಸಿಡಿದ್ದಾರೆ. ನಂತರ ಪೊಲೀಸರು ರೈತರನ್ನು ಮಾಸನಿ ಎಂಬಲ್ಲಿನ ಮೇಲ್ಸೇತುವೆಯಲ್ಲಿ ತಡೆದಿದ್ದಾರೆ.

ಸಿಂಘು ಗಡಿಯಲ್ಲಿ ಪ್ರತಿಭಟನಾ ನಿರತ ರೈತರ ಜೊತೆ ಇಂದು ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದೆ. ರೈತರ ಪ್ರತಿಭಟನೆ ಇಂದು 40ನೇ ದಿನಕ್ಕೆ ಕಾಲಿಡುತ್ತಿದೆ.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ