Breaking News

ಚೇತರಿಸಿಕೊಂಡ ಕೇಂದ್ರ ಸಚಿವ ಸದಾನಂದಗೌಡ, 24 ಗಂಟೆ ಐಸಿಯುನಲ್ಲಿ ನಿಗಾ

Spread the love

ಬೆಂಗಳೂರು : ತೀವ್ರ ಅನಾರೋಗ್ಯದಿಂದ ಅಸ್ತತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ಸ್ಥಿತಿ ಸುಧಾರಣೆ ಕಂಡು ಬಂದಿದ್ದು,ಯಾವುದೇ ಆತಂಕ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.ಪ್ರಸ್ತುತ ಬೆಂಗಳೂರಿನ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸದಾನಂದಗೌಡ ಅವರನ್ನು 24 ಗಂಟೆಗಳ ಕಾಲ ನಿಗಾವಹಿಸಿ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ.ಸದ್ಯ ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಟರ್ ಆಸ್ಪತ್ರೆ
ಫಿಜಿಷಿಯನ್ ಡಾ.ಬೃಂದಾ ಮಾಹಿತಿ ನೀಡಿದ್ದಾರೆ.

ಆಸ್ಟರ್ ಆಸ್ಪತ್ರೆಯಲ್ಲಿ ಡಾ. ಬೃಂದಾ ಮತ್ತವರ ವೈದ್ಯಕೀಯ ತಂಡವು ಡಿವಿಎಸ್ ಅವರ ಆರೋಗ್ಯದ ಬಗ್ಗೆ ನಿಗಾ ಇರಿಸಲಾಗಿದೆ. ಇಂದು ಮಧ್ಯಾಹ್ನ ಚಿತ್ರದುರ್ಗದಲ್ಲಿ ಅಸ್ವಸ್ಥರಾದ ಸದಾನಂದಗೌಡರಿಗೆ ಅಲ್ಲಿನ ಬಸವೇಶ್ವರ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಯಿತು. ಸಚಿವರಿಗೆ ಚಿಕಿತ್ಸೆ ನೀಡಲಾಗಿದ್ದು,ಅವರ ಹೃದಯ ಬಡಿತ ಸಹಜವಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ