Breaking News

ನಗರದ ಹೊರವಲಯದ ಸುರತ್ಕಲ್ ನ ಟೋಲ್ ಸಿಬ್ಬಂದಿ ಮೇಲೆ ಏಳು ಮಂದಿ ಕಾರು ಸವಾರರು ಹಲ್ಲೆ ನಡೆಸಿದ್ದಾರೆ.

Spread the love

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ನ ಟೋಲ್ ಸಿಬ್ಬಂದಿ ಮೇಲೆ ಏಳು ಮಂದಿ ಕಾರು ಸವಾರರು ಹಲ್ಲೆ ನಡೆಸಿದ್ದಾರೆ.
ಭಟ್ಕಳ ನೋಂದಣಿ ನಂಬರ್ ಕಾರು ಸುರತ್ಕಲ್ ಟೋಲ್ ನಲ್ಲಿ ಹಣ ಪಾವತಿಸಲು ನಿರಾಕರಿಸಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಹಣ ಪಾವತಿಸಲು ತಿಳಿಸಿದ್ದಾರೆ. ಹಣ ಪಾವತಿ ಮಾಡೋದಿಲ್ಲ ಎಂದು ತಗಾದೆ ತೆಗೆದು ಟೋಲ್ ಸಿಬ್ಬಂದಿಗೆ ಏಳು ಮಂದಿ ಸೇರಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಲ್ಲೆಯಿಂದಾಗಿ ಟೋಲ್ ಸಿಬ್ಬಂದಿಯ ಕೈ ಮುರಿತಕ್ಕೊಳಗಾಗಿದ್ದು, ಬಳಿಕ ಹಲ್ಲೆ ನಡೆಸಿದ ಆರೋಪಿಗಳು ಕಾರಿನ ಸಮೇತ ಪರಾರಿಯಾಗಿದ್ದಾರೆ.
ಹಲ್ಲೆಯ ದೃಶ್ಯ ಟೋಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಬಗ್ಗೆ ಎನ್‍ಹೆಚ್‍ಎಐ ಟೋಲ್ ಸಿಬ್ಬಂದಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ